ಉಡುಪಿ, ಜೂ 20 (DaijiworldNews/PY): ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ರಾಜ್ಯದ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲು ನೀಡಿದ ಆದೇಶದ ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯನ್ನು ಸೇರಿಸಿ ಅನ್ ಲಾಕ್ ಮಾಡುವಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕೊರೊನಾ ಪರೀಕ್ಷೆ ನಡೆದಿದ್ದು, ಪ್ರಸ್ತುತ ದಿನಕ್ಕೆ 3 ಸಾವಿರಕ್ಕೂ ಅಧಿಕ ಕೊರೊನಾ ಪರೀಕ್ಷೆ ನಡೆಯುತ್ತಿದೆ. ಅದರಲ್ಲಿ ಶೇ.5.05 ಪಾಸಿಟಿವಿಟಿ ದರ ಇರುವುದರಿಂದ ಉಡುಪಿ ಜಿಲ್ಲೆಯನ್ನು ಅನ್ ಲಾಕ್ ಮಾಡಲು ನಾನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ವಿನಂತಿಸುತ್ತೇನೆ" ಎಂದು ತಿಳಿಸಿದ್ದಾರೆ.