ಮಂಗಳೂರು, ಜೂ. 20 (DaijiworldNews/HR): ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಂಗಳೂರಿನ ಮಂಗಳಾದೇವಿ ದೇವಾಲಯದ ಆವರಣದಲ್ಲಿ ಅದ್ದೂರಿ ಮದುವೆ ನಡೆದಿದ್ದು, ಮಂಗಳೂರು ಎಸಿ, ಮನಪ ಅಧಿಕಾರಿಗಳಿಂದ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲಾಡಳಿತದ ಆದೇಶಕ್ಕೆ ಬೆಲೆ ಕೊಡದೆ, ಕೊರೊನಾ ಮಾರ್ಗಸೂಚಿ ಗಾಳಿಗೆ ತೂರಿ ಮದುವೆ ಸಮಾರಂಭ ನಡೆಯುತ್ತಿದೆ ಎಂಬ ದೂರು ಬಂದ ಹಿನ್ನೆಲೆ ಸ್ಥಳಕ್ಕೆ ಅಧಿಕಾರಿಳು ಭೇಟಿ ನೀಡಿದ್ದಾರೆ.
ಇನ್ನು ದೇವಾಲಯದ ಹೊರಗೆ ನಿಂತಿರುವ 40 ಕ್ಕೂ ಹೆಚ್ಚು ಕಾರುಗಳು ನಿಂತಿರುವುದು ಕಂಡು ಬಂದಿದ್ದು, ಲಾಕ್ಡೌನ್ ನಿಯಮ ಉಲ್ಲಂಘಿಸಿದವರನ್ನು ಅಧಿಕಾರಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಂಟ್ರೋಲ್ಗೆ ಬರದಿದ್ದರೂ ಜನರು ಬೇಜವಾಬ್ದಾರಿಯಿಂದ ನಡೆದು ಕೊಳ್ಳುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ.