ಗಂಜಿಮಠ, ಜೂ. 20 (DaijiworldNews/SM): ಇಲ್ಲಿನ ನೋನಲ್ ಎಂಬಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ತಡೆಗೋಡೆ ಕುಸಿತಗೊಂಡಿದ್ದು, ಸ್ವಲ್ಪದರಲ್ಲೇ ಅನಾಹುತ ತಪ್ಪಿದ ಘಟನೆ ರವಿವಾರದಂದು ನಡೆದಿದೆ.
ಸಾಂದರ್ಭಿಕ ಚಿತ್ರ
ಇತ್ತೀಚೆಗೆ ಸುರಿದ ಧಾರಕಾರ ಮಳೆಗೆ ಗುಡ್ಡ ಕುಸಿತಗೊಂಡು ತಡೆಗೋಡೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ತಡೆಗೋಡೆ ವೆಲ್ಡಿಂಗ್ ಕಾಮಗಾರಿ ನಡೆಯುತ್ತಿತ್ತು. ಆದರೆ, ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಗಿದ್ದಾರೆ. ನಾಲ್ಕು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ತಡೆಗೋಡೆ ಕುಸಿತದ ವೇಳೆ ಓರ್ವ ಕಾರ್ಮಿಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ನಾಲ್ಕು ಮಂದಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.