ಉಡುಪಿ, , ಜೂ 21 (DaijiworldNews/MS): ದಕ್ಷಿಣ ಭಾರತದಲ್ಲಿ ಬಹಳಷ್ಟು ಹಿರಿಯ ನಾಯಕರಿದ್ದು ಕೇಂದ್ರ ಸಚಿವೆ ಆಗಬೇಕೆನ್ನುವ ಯಾವ ಆಕಾಂಕ್ಷೆಯೂ ನನಗಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಅವರು ಜಿಲ್ಲೆಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ,"ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರ ವಾಗಿ ನನಗೇನು ತಿಳಿದಿಲ್ಲ. ಈ ಬಗ್ಗೆ ಪ್ರಧಾನಿಗಳೇ ಮಾಹಿತಿ ಕೊಡಬೇಕು. ಸಚಿವೆ ಆಗಬೇಕೆಂಬ ಆಕಾಂಕ್ಷೆ ಖಂಡಿತ ನನಗಿಲ್ಲದಕ್ಷಿಣ ಭಾರತ ಹಾಗೂ ಕರ್ನಾಟಕದಲ್ಲಿ ನನಗಿಂತ ತುಂಬಾ ಹಿರಿಯ ನಾಯಕರಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಇನ್ನು ಜಿಲ್ಲೆಯನ್ನು ಸಂಪೂರ್ಣವಾಗಿ ಅನ್ ಲಾಕ್ ಮಾಡುವ ವಿಚಾರವಾಗಿ ಮಾತನಾಡಿ, ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಾಹಿತಿಗಳನ್ನು ಪಡೆದುಕೊಂಡಿದ್ದೇನೆ,ಇನ್ನು ಮುಖ್ಯ ಕಾರ್ಯದರ್ಶಿಗಳು ಉಡುಪಿಯ ಕೊರೋನಾ ಹೆಲ್ತ್ ರಿಪೋರ್ಟ್ ತರಿಸಿಕೊಳ್ಳಲಿದ್ದಾರೆ. ಕೊರೊನಾ ಕಾರಣದಿಂದ ಕರಾವಳಿ ಜಿಲ್ಲೆಗಳಲ್ಲಿ ಪೂರ್ತಿ ವ್ಯಾಪಾರ-ವಹಿವಾಟು ನಿಂತುಹೋಗಿದ್ದು ಜನ ಸಂಕಷ್ಟದಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳ ಬಳಿ ಉಡುಪಿ ಜಿಲ್ಲೆಯ ಪರಿಸ್ಥಿತಿಯನ್ನು ವಿವರಿಸುತ್ತೇನೆ. ಲಾಕ್ಡೌನ್ ಸಂಪೂರ್ಣವಾಗಿ ತೆಗೆದು ಹಾಕಬೇಕು ಎಂದು ವಿನಂತಿಸುತ್ತೇನೆ ಎಂದು ಹೇಳಿದರು.
ತುಳು ಭಾಷೆಯ ಸಂವಿಧಾನ ಮಾನ್ಯತೆಯ ವಿಚಾರವಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, " ತುಳು ಭಾಷೆಗೆ ಮಾನ್ಯತೆ ಸಿಗಲು ಒತ್ತಾಯಿಸಿ, ಸಂಸತ್ತಿನಲ್ಲಿ ಮಾತನಾಡಿದ್ದೇನೆ, ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ನಾನು ಮನವಿ ಸಲ್ಲಿಸಿದ್ದಾರೆ, ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತನಾಡಿದ್ದಾರೆ. ಪ್ರತ್ಯೇಕ ತುಳು ರಾಜ್ಯ ಕುಚೋದ್ಯದ ಬೇಡಿಕೆಯಾಗಿದ್ದು ಇದಕ್ಕೆ ಯಾವ ಬೆಂಬಲವೂ ಇಲ್ಲ, ತುಳು ಭಾಷೆಎಂಟನೇ ಪರಿಚ್ಛೇದಕ್ಕೆ ಸೇರಿಸಲು ಏನೆಲ್ಲ ಮಾಡಬೇಕು ಆ ಪ್ರಯತ್ನ ಮಾಡುತ್ತೇವೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ಎಡಮೊಗೆ ಉದಯ ಗಾಣಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಪ್ರತಿಕ್ರಿಯಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು.ಅಪರಾಧದಲ್ಲಿ ಪಕ್ಷ, ರಾಜ, ಧರ್ಮ ರಾಜಕಾರಣ ಇಲ್ಲ ಘಟನೆ ನಡೆದ ಮೊದಲ ದಿನವೇ ಗೃಹ ಸಚಿವ, ಎಸ್ಪಿ ಅವರಿಗೆ ಫೋನ್ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಿದ್ದೇನೆ ಎಂದು ಹೇಳಿದರು.