ಮಂಗಳೂರು, ಜೂ. 22 (DaijiworldNews/SM): ದ.ಕ. ಜಿಲ್ಲೆಯಲ್ಲಿ ಜೂನ್ 23ರಿಂದ ಹೊಸ ಮಾರ್ಗಸೂಚಿ ಜಾರಿಗೆ ಬರಲಿದ್ದು, ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯ ತನಕ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಹೊಸ ಮಾರ್ಗಸೂಚಿಯಲ್ಲಿ ಹೆಚ್ಚಿನ ವಿನಾಯಿತಿ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ದೈಜಿವರ್ಲ್ಡ್ ಗೆ ಮಾಹಿತಿ ನೀಡಿದ್ದಾರೆ.
ಹೊಸ ಮಾರ್ಗಸೂಚಿಯಲ್ಲಿ ಏನಿದೆ?
ಬೆ. 7ರಿಂದ ಮಧ್ಯಾಹ್ನ 2ರ ತನಕ ಎಲ್ಲಾ ಅಂಗಡಿಗಳು ಓಪನ್
ದ.ಕ. ಜಿಲ್ಲೆಯ ಮಾಲ್ ಗಳು ಓಪನ್ ಆಗಲ್ಲ
ಹವಾನಿಯಂತ್ರಿತ ಕಾಂಪ್ಲೆಕ್ಸ್ ಗಳಿಗೂ ಅವಕಾಶವಿಲ್ಲ
ಹೋಟೇಲ್ ಗಳಲ್ಲಿ 50% ಜನರಿಗೆ ಅವಕಾಶ ನೀಡಲಾಗಿದೆ
ಮಧ್ಯಾಹ್ನ ನಂತರ ಹೋಟೇಲ್ ಗಳಲ್ಲಿ ಪಾರ್ಸೆಲ್ ಮಾತ್ರ ಲಭ್ಯ
ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 7ರ ತನಕ ವೀಕೇಂಡ್ ಕರ್ಫ್ಯೂ
ವೀಕೆಂಡ್ ಕರ್ಫ್ಯೂ ಸಂದರ್ಭ ಹಾಲಿನ ಬೂತ್ ಗಳಿಗೆ ಮಾತ್ರ ಅವಕಾಶ
ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಬೇರೆ ಅಂಗಡಿಗಳು ಓಪನ್ ಇರಲ್ಲ
ವೀಕೆಂಡ್ ಕರ್ಫ್ಯೂ ಸಂದರ್ಭ 24 ಗಂಟೆ ಕಾರ್ಯಾಚರಿಸುವ ಕಂಪೆನಿಗಳಿಗೆ ಅವಕಾಶ
ಕಂಪೆನಿಗಳ ಐಡಿ ತೋರಿಸಿ ಸಂಚಾರ ನಡೆಸಬಹುದು
ವಾರಾಂತ್ಯ ಕರ್ಫ್ಯೂ ಸಂದರ್ಭ ಬಸ್ ಸಂಚಾರಕ್ಕೆ ಅವಕಾಶವಿಲ್ಲ
ಪ್ರತಿ ದಿನ ಸಂಜೆ 7ರಿಂದ ಬೆಳಿಗ್ಗೆ 7ರ ತನಕ ನೈಟ್ ಕರ್ಫ್ಯೂ ಜಾರಿ
ಜಿಲ್ಲೆಯಲ್ಲಿ ಬಸ್ ಸಂಚಾರಕ್ಕೆ ಅವಕಾಶ, ಶೇ. 50ರಷ್ಟು ಪ್ರಯಾಣಿಕರೊಂದಿಗೆ ಸಂಚಾರಕ್ಕೆ ಅವಕಾಶ
ಬೆಳಿಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯ ತನಕ ಬಸ್ ಸಂಚಾರ
ಬಸ್ ಗಳಲ್ಲಿ ನಿಂತು ಪ್ರಯಾಣಕ್ಕೆ ಅವಕಾಶವಿಲ್ಲ
ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕರಿಗೆ ಅವಕಾಶವಿಲ್ಲ
ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧ
ಬೆಳಿಗ್ಗೆ 5-10 ಗಂಟೆಯ ತನಕ ಜಾಗಿಂಗ್, ವಾಕಿಂಗ್ ಗೆ ಪಾರ್ಕ್ ಗಳು ಓಪನ್
ಪೂರ್ವಾನುಮತಿ ಪಡೆದ ವಿವಾಹಗಳು 25 ಜನಸಂಖ್ಯೆಯಲ್ಲಿ ನಡೆಸಬಹುದು
ಅಂಗಡಿಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಕರೆದೊಯ್ಯಲು ಅವಕಾಶವಿಲ್ಲ
ಜಿಲ್ಲೆಯ ಜನತೆ ಜಿಲ್ಲಾಡಳಿತ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು
ಜಿಲ್ಲಾಡಳಿತದೊಂದಿಗೆ ಜನತೆ ಸಹಕಾರ ನೀಡುವಂತೆ ಡಿಸಿ ಮನವಿ