ಮಂಗಳೂರು, ಜೂ 23 (DaijiworldNews/MS): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತಷ್ಟು ಸಡಿಲಿಕೆ ಮಾಡಿದ್ದು ಜೂ.23ರ ಇಂದಿನಿಂದ ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ಕೆಎಸ್ಆರ್ ಟಿಸಿ ಬಸ್ ಕಾರ್ಯ ಆರಂಭಿಸಿದೆ. ಆದರೆ ಮಂಗಳೂರು ನಗರದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದೆ ಬಿಕೋ ಅನ್ನುತ್ತಿದೆ. ಬೆರಳೆಣಿಕೆಯ ಬಸ್ ಗಳು ಸಂಚರಿಸಿದದೂ ಬಸ್ ಗಳಲ್ಲಿ ಪ್ರಯಾಣಿಕರಿಲ್ಲ.
ಇನ್ನು ಜಿಲ್ಲೆಯಲ್ಲಿ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಆಯಾ ರೂಟ್ ತಲುಪುವ ಹಾಗೆ ಜಿಲ್ಲೆಯೊಳಗೆ ಸೀಮಿತ ಸಂಖ್ಯೆಯಲ್ಲಿ ಬಸ್ ಸಂಚಾರ ಮಾಡಲಿದ್ದು,ದೂರದ ಊರಿಗೆ ರಾತ್ರಿವರೆಗೂ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಬಿಡುವ ಸಾಧ್ಯತೆ ಇದೆ.
ಹೊರರಾಜ್ಯದ ಕೆಲವು ರೂಟ್ ಗಳಲ್ಲೂ ಸಂಚಾರಕ್ಕೆ ಅನುಮತಿ ಇದ್ದು ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುತ್ತದೆ ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ಕಮಲ್ ತಿಳಿಸಿದ್ದಾರೆ.ಈ ನಡುವೆ ನಗರದಲ್ಲಿ ಖಾಸಗಿ ಮತ್ತು ಸಿಟಿ ಬಸ್ ಸಂಚಾರಕ್ಕೆ ಇಲ್ಲ ಎಂದು ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಳ್ಳಾಲ್ ಮತ್ತು ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.