ಮಂಗಳೂರು, ಜೂ 23 (DaijiworldNews/PY): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ ಅಭಿಯಾನದ ಅಂಗವಾಗಿ ಬುಧವಾರ ಶಾಸಕ ಡಾ. ವೈ.ಭರತ್ ಶೆಟ್ಟಿ ಅವರು ಬಡಗ ಉಳೇಪಾಡಿ ತಮ್ಮಯ್ಯ ಪೂಜಾರಿ ಅವರ ಜಮೀನಿನಲ್ಲಿ ಟ್ರಾಕ್ಟರ್ ಚಲಾಯಿಸುವ ಮೂಲಕ ಚಾಲನೆ ನೀಡಿದರು.
ಕೃಷಿ ಇಲಾಖೆಯ ಮುಖೇನ ರಾಜ್ಯ ಸರ್ಕಾರದ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಬಗ್ಗೆ ಶಾಸಕರು ಈಗಾಗಲೇ ವಿವಿಧ ಪಂಚಾಯತ್ಗಳಲ್ಲಿ ಸರಣಿ ಸಭೆಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯ ಹಾಗೂ ಕೃಷಿಕರು ಯೋಜನೆಯ ಪ್ರಯೋಜನವನ್ನು ಪಡೆಯಲು ಮಾಹಿತಿ ನೀಡುವ ಕಾರ್ಯವನ್ನು ನೀಡುತ್ತಾ ಬಂದಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ ಸಂದೀಪ್ ಪಚ್ಚನಾಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಿಶ್ವನಾಥ ಶೆಟ್ಟಿ, ಸ್ಥಳೀಯ ಪಂಚಾಯತ್ ಅಧ್ಯಕ್ಷ ನೋಣಯ್ಯ ಕೋಟ್ಯಾನ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸೋಹನ್ ಅತಿಕಾರಿ ಪ್ರಧಾನ ಕಾರ್ಯದರ್ಶಿ
ರಾಜೇಶ್ ಗುರುಪುರ, ಪಂಚಾಯತ್ ಉಪಾಧ್ಯಕ್ಷರುಗಳು, ಪಂ.ಸದಸ್ಯರುಗಳು, ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಮಟ್ಟದ
ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ವೀಣಾ ರೈ, ಸಿಹೆಚ್ಎಸ್ಸಿ ಕೇಂದ್ರದ ಪ್ರಮುಖರು, ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.