ಮಂಗಳೂರು, ಜೂ 25 (DaijiworldNews/PY): ಬಿರುಕು ಬಿಟ್ಟಿರುವ ಮರವೂರು ಸೇತುವೆಯ ತಾತ್ಕಾಲಿಕ ದುರಸ್ತಿ ಕಾರ್ಯ ಭರದಿಂದ ನಡೆಯುತ್ತಿದ್ದು, ಗುತ್ತಿಗೆದಾರರು ಹಾಗೂ ಎಂಜಿನಿಯರ್ ಜುಲೈಯಲ್ಲಿ ಕೊನೆಯಲ್ಲಿ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಜೂನ್ 24ರ ಗುರುವಾರ ಕಾಮಗಾರಿ ಪ್ರಗತಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು, "ಸೇತುವೆಯ ದುರಸ್ತಿಯಾದ ಕೂಡಲೇ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗುವುದು. ಪಕ್ಕದಲ್ಲಿ ಹೊಸ ಸೇತುವೆಯ ಕಾಮಗಾರಿಯೂ ನಡೆಯುತ್ತಿದ್ದು, ಪೂರ್ಣವಾದ ಬಳಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಿ, ಹಳೆಯ ಸೇತುವೆಯ ಸಂಪೂರ್ಣ ದುರಸ್ತಿ ಮಾಡುವ ಯೋಜನೆ ಇದೆ" ಎಂದು ತಿಳಿಸಿದ್ದಾರೆ.
"ತಜ್ಞರ ಸಲಹೆಯಂತೆ, ಎಂಜಿನಿಯರ್ ಮತ್ತು ಗುತ್ತಿಗೆದಾರರು ದುರಸ್ತಿ ಸ್ಥಳದಲ್ಲಿದ್ದು, ಪ್ರಗತಿ ಕಾರ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ" ಎಂದು ಹೇಳಿದ್ದಾರೆ.