ಕಾಸರಗೋಡು, ಜೂ 25 (DaijiworldNews/PY): ರೈಲು ಬಡಿದು ತಮಿಳುನಾಡು ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಕಾಸರಗೋಡು ರೈಲ್ವೆ ನಿಲ್ದಾಣ ಸಮೀಪ ನಡೆದಿದೆ.
ತಮಿಳುನಾಡಿನ ಅರುಳ್ ಮಣಿ (34) ಮೃತಪಟ್ಟವರು. ಕೂಲಿ ಕಾರ್ಮಿಕಾರಾಗಿದ್ದ ಇವರು ಕಾಸರಗೋಡು ಪಳ್ಳಂ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಗುರುವಾರ ರಾತ್ರಿ ಕಣ್ಣೂರಿಗೆ ತೆರಳುವುದಾಗಿ ಹೇಳಿ ಹೊರಟಿದ್ದು, ಶುಕ್ರವಾರ ಬೆಳಿಗ್ಗೆ ರೈಲು ನಿಲ್ದಾಣ ಸಮೀಪದ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.
ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.