ಮಂಗಳೂರು, ಜೂ 26 (DaijiworldNews/PY): ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದ್ದು, ಈ ಹಿನ್ನೆಲೆ ಕೆಎಸ್ಆರ್ಟಿಸಿ ಬಸ್ಗಳು ಕೂಡಾ ರಸ್ತೆಗಿಳಿದಿಲ್ಲ.
ನಗರದಲ್ಲಿ ಕೆಲವು ದ್ವಿಚಕ್ರ ವಾಹನಗಳು ಹಾಗೂ ಕಾರುಗಳು ಚಲಿಸುತ್ತಿರುವುದು ಕಂಡುಬಂದಿದ್ದು, ನಗರದಲ್ಲಿ 40ಕ್ಕೂ ಹೆಚ್ಚಿನ ಕಡೆ ಚೆಕ್ಪೋಸ್ಟ್ ಹಾಕಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.
ದ.ಕ. ಜಿಲ್ಲೆಯಲ್ಲಿ ಸೋಂಕು ನಿಯಂತ್ರಿಸುವ ಹಿನ್ನೆಲೆಯ ಶನಿವಾರ ಹಾಗೂ ಭಾನುವಾರದಂದು ಕಟ್ಟುನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಆರೋಗ್ಯ ಸೇವೆ ಹೊರತು ಪಡಿಸಿ ಬಹುತೇಕ ಎಲ್ಲಾ ಚಟುವಟಿಕೆಗಳು ಸ್ತಭವಾಗಿರಲಿದೆ. ಇನ್ನು ಈ ಸಂದರ್ಭದಲ್ಲಿ ಸಾರ್ವಜನಿಕರ ವಾಹನಗಳು ಸಂಚಾರ ನಡೆಸುವಂತಿಲ್ಲ. ಖಾಸಗಿ ವಾಹನಗಳು ರಸ್ತೆಗಿಳಿದ್ದಲ್ಲಿ ಮುಲಾಜಿಲ್ಲದೆ ಸೀಝ್ ಮಾಡಲು ಕಾನೂನು ಹಾಗೂ ಸುವ್ಯವಸ್ಥೆಯ ಡಿಸಿಪಿ ಹರಿರಾಂ ಶಂಕರ್ ಆದೇಶ ನೀಡಿದ್ದಾರೆ.