ಬಂಟ್ವಾಳ, ಜೂ 26 (DaijiworldNews/MS): ಇಲ್ಲಿನ ಪಾಣೆಮಂಗಳೂರು ಬಳಿ ರಾತ್ರಿ ವೇಳೆಯಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಮಾರಾಟ ಮಾಡುತ್ತಿದ್ದ ವೇಳೆ ತಹಶಿಲ್ದಾರ್ ರಶ್ಮಿ. ಎಸ್.ಆರ್. ನೇತೃತ್ವದ ದಾಳಿ ನಡೆಸಿ ಘಟನೆ 25 ರ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಅರಣ್ಯ ಇಲಾಖೆ ಮತ್ತು ನಗರ ಪೊಲೀಸ್ ಠಾಣೆ ಸಿಬ್ಬಂದಿಗಳ ಸಕ್ರಿಯ ಸಹಕಾರದೊಂದಿಗೆ ಕಂದಾಯ ಇಲಾಖೆ ಸಿಬ್ಬಂದಿ ಶುಕ್ರವಾರ ಮಧ್ಯರಾತ್ರಿ ಈ ದಾಳಿ ನಡೆಸಿದ್ದಾರೆ.ದಾಳಿಯ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಿದ್ದು ಸ್ಥಳದಲ್ಲಿ ಒಂದು ಟಿಪ್ಪರ್, ಒಂದು ದೋಣಿ ಬಿಟ್ಟು ಪರಾರಿಯಾಗಿದ್ದಾರೆ.
ತಾಲೂಕಿನಾದ್ಯಂತ ಅಕ್ರಮ ಮರಳು ಗಣಿಗಾರಿಕೆ ಆರೋಪಗಳು ಕೇಳಿಬರುತ್ತಿರುವುದರಿಂದ ಈ ದಾಳಿ ನಡೆಸಲಾಗಿದೆ. ತಹಶಿಲ್ದಾರ್ ರಶ್ಮಿ. ಎಸ್.ಆರ್ ಅವರು ಈ ಹಿಂದೆಯೂ ಅಕ್ರಮ ಮರಳುಗಾರಿಕೆ ಬಗ್ಗೆ ಅನೇಕ ದಾಳಿ ನಡೆಸಿ ಕಾನೂನು ಕ್ರಮ ಕೈಗೊಂಡಿದ್ದರು.
ಬಂಟ್ವಾಳ ವಲಯ ಅರಣ್ಯ ಧಿಕಾರಿ ರಾಜೇಶ್ ಬಳಿಗಾರ್ ನೇತ್ರತ್ವದ ತಂಡ ದಲ್ಲಿ ಅಧಿಕಾರಿಗಳಾದ ಪ್ರೀತಂ, ಜಿತೇಶ್ ಸಿಬ್ಬಂದಿ ಗಳಾದ ಬಸವ , ಪ್ರವೀಣ್ ಕಾರ್ಯಚರಣೆ ಯಲ್ಲಿ ಭಾಗವಹಿಸಿದ್ದರು.