ಮಂಗಳೂರು, ಜೂ.28 (DaijiworldNews/HR): ಕೇರಳದಿಂದ ದಕ್ಷಿಣ ಕನ್ನಡಕ್ಕೆ ಬರಲು ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, "ಕೇರಳದಲ್ಲಿ ಡೆಲ್ಟಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಪ್ರಕಾರ ಕೇರಳ, ಗಡಿಭಾಗದಿಂದ ಸಂಚರಿಸುವವರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬರಲು ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರಬೇಕು" ಎಂದಿದ್ದಾರೆ.
ಇನ್ನು ಗಡಿಗಳಲ್ಲಿಯೂ ತಪಾಸಣೆ ಕ್ರಮಗಳನ್ನು ಜರುಗಿಸಲು ಜಿಲ್ಲಾಡಳಿತ ಮುಂದಾಗಿದ್ದು, ತಲಪಾಡಿ, ನೆಟ್ಟಣಿಗೆ ಮುಡ್ನೂರು, ಸಾರಡ್ಕ, ಜಾಲ್ಸೂರು ಗಡಿಗಳಲ್ಲಿ ತಪಾಸಣೆಯನ್ನು ಹೆಚ್ಚಿಸಲಗಿದ್ದು, ಈ ನಿಯಮ ನಾಳೆಯಿಂದಲೇ ಜಾರಿಗೊಳಿಸಲಾಗುವುದು ಎಂದು ರಾಜೇಂಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.