ಧರ್ಮಸ್ಥಳ, ಜೂ 29 (DaijiworldNews/MS): ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕಿನ ಪಿಗ್ಮಿ ಸಂಗ್ರಾಹಕ, ಧರ್ಮಸ್ಥಳ ಗ್ರಾಮದ ವೈಶಾಲಿವಸತಿ ಗೃಹ ನಿವಾಸಿ ಜಗದೀಶ್ ರಾವ್(41) ಅವರು ಸೋಮವಾರ ಮನೆಯ ಸಮೀಪವೇ ಇದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಧರ್ಮಸ್ಥಳ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ದೈನಿಕ ಠೇವಣಿ ಸಂಗ್ರಹ ಕರಾಗಿದ್ದ ಅವರು ಕನ್ಯಾಡಿಯಲ್ಲಿ ವಾಹನ ವಾಯುಮಾಲಿನ್ಯ ತಪಾಸಣಾ ಕೇಂದ್ರ ಹೊಂದಿದ್ದರು. ಕೈ ಸಾಲದ ಜೊತೆಗೆ ಖಾಸಗಿ ಫೈನಾನ್ಸ್ ಒಂದರಲ್ಲಿ ಚಿನ್ನವನ್ನು ಅಡವಿಟ್ಟು 15 ಲಕ್ಷ ರೂ. ಸಾಲ ಮಾಡಿದ್ದರು.
ಸಾಲದ ಸಮಸ್ಯೆ ತೀವ್ರವಾಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿರುವ ಬಗ್ಗೆ ಪತ್ನಿ ತಿಳಿಸಿದಂತೆ ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821