ಉಡುಪಿ, ಜೂ. 29(DaijiworldNews/SM): ಉಡುಪಿ ಮೂಲದ ಹೊರ ರಾಜ್ಯ ಅಥವಾ ಹೊರ ಜಿಲ್ಲೆಗಲಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲೆಯಲ್ಲಿಯೇ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಉಡುಪಿ ಮೂಲದವರಾಗಿದ್ದು ಇತರ ಜಿಲ್ಲೆ ಅಥವಾ ಇತರ ರಾಜ್ಯಗಳ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತ್ತು 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಇದಕ್ಕೆ ಅರ್ಹರಾಗಿದ್ದಾರೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು ಇಂತಹ ವಿದ್ಯಾರ್ಥಿಗಳನ್ನು ವಿಷೇಶವಾಗಿ ಪರಿಗಣಿಸಿ ಅವರಿಗೆ ಲಸಿಕೆ ನೀಡುವ ಕೆಲಸವನ್ನು ಮಾಡಲಾಗುವುದು.
ಇನ್ನು ಉಡುಪಿ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಲಸಿಕಾ ಅಭಿಯಾನ ಆರಂಭಗೊಂಡಿದೆ. ಈ ಹಂತದಲ್ಲಿ ಹೊರ ರಾಜ್ಯ ಜಿಲ್ಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಹಲವಾರು ವಿದ್ಯಾರ್ಥಿಗಳು ತಮ್ಮ ಹತ್ತಿರದ ಕಾಲೇಜುಗಳಲ್ಲಿ ವ್ಯಾಕ್ಸೀನ್ ಪಡೆದುಕೊಳ್ಳಲು ಆಗಮಿಸಿದ್ದು ಇದರಿಂದಾಗಿ ಗೊಂದಲ ಕೂಡಾ ಉಂಟಾಗಿತ್ತು.
ಉಡುಪಿ ಶಾಸಕ ರಘುಪತಿ ಭಟ್ ಅವರು ಈ ವಿಷಯವನ್ನು ಉಸ್ತುವಾರಿ ಸಚಿವರೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಸ್ತಾಪಿಸಿದ್ದು, ಇದೀಗ ಜಿಲ್ಲಾಡಳಿತ ಇದಕ್ಕೆ ಪೂರಕವಾಗಿ ಆದೇಶ ನೀಡಿದೆ. ಅರ್ಹ ವಿದ್ಯಾರ್ಥಿಗಳು ಗೂಗಲ್ ಫಾರಂ ಮೂಲಕ ನೊಂದಣಿ ಮಾಡಿಸಿಕೊಳ್ಳಬೇಕು. ಲಸಿಕೆ ಲಭ್ಯತೆಯ ಕುರಿತು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.