ಉಡುಪಿ, ಜೂ 30 (DaijiworldNews/PY): ಗ್ಯಾಸ್ ಟ್ಯಾಂಕರ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಜೂನ್ 30ರ ಬುಧವಾರ ಉದ್ಯಾವರದಲ್ಲಿ ನಡೆದಿದೆ.
ಗಾಯಗೊಂಡವರನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್ (27) ಎಂದು ಗುರುತಿಸಲಾಗಿದೆ.
ರಾಕೇಶ್ ಅವರು ರಾತ್ರಿ ಪಾಳಿಯ ಕೆಲಸ ಮುಗಿಸಿ ಕಾರಿನಲ್ಲಿ ಉಡುಪಿಯತ್ತ ಹಿಂದಿರುಗಿದ್ದ ವೇಳೆ ಮುಂಜಾನೆ 5.30ರ ಸುಮಾರಿಗೆ ಉದ್ಯಾವರದ ಸಮೀಪ ಗ್ಯಾಸ್ ಟ್ಯಾಂಕರ್ಗೆ ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿ ಹೊಡೆದ ಪರಿಣಾಮ ರಾಕೇಶ್ ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ.
ಕೂಡಲೇ ರಾಕೇಶ್ ಅವರನ್ನು ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಆದರ್ಶ ಆಸ್ಪತ್ರೆಗೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗುತ್ತಿದೆ.