ಬೆಳ್ತಂಗಡಿ, ಜು 01 (DaijiworldNews/MS): ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಯುವಕನನ್ನು ಬೆಳ್ತಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸವಣಾಲು ಗ್ರಾಮದ ಲಾಯಿಲದ ನಿವಾಸಿ ಕಿರಣ್ ಬಂಧಿತ ಆರೋಪಿ. ಈತ ಕಡಿರುದ್ಯಾವರ ಗ್ರಾಮದ ಕನಪ್ಪಾಡಿಯ ಯುವತಿಯೊಂದಿಗೆ ಸಲುಗೆಯಿಂದ ಇದ್ದು ಆಗಾಗ ಆಕೆಯ ಮನೆಗೆ ಹೋಗಿ ಬರುತ್ತಿದ್ದ. ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳಸಿಕೊಂಡಿದ್ದಾನೆ. ಇದರಿಂದ ಯುವತಿ ಏಳು ಗರ್ಭಿಣಿಯಾಗಿದ್ದು, ನಂತರ ಮದುವೆಯಾಗಲು ನಿರಾಕರಿಸಿ ಮೋಸ ಮಾಡಿದ್ದಾನೆ.
ನೊಂದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ದ ಈ ಹಿಂದೆ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು.