ಮಂಗಳೂರು, ಜು 01 (DaijiworldNews/MS): ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸ್ವಾಮಿತ್ ಶೆಟ್ಟಿ (25) ಜು.01 ರ ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಜೆಪ್ಪಿನಮೊಗರು ತಾರ್ದೊಲ್ಯದ ಕ್ಷುಲ್ಲಕ ಕಾರಣಕ್ಕೆ ತಂದೆಯೇ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದರು. ಆರೋಪಿ ತಂದೆ ವಿಶ್ವನಾಥ ಶೆಟ್ಟಿ ಯಾನೆ ತಿಪ್ಪಿ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಘಟನೆ ನಡೆದಂದೇ ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದರು.
ದನಗಳನ್ನು, ಕೋಳಿಗಳನ್ನು ಮನೆಯ ಹೊರಗಡೆ ಕಟ್ಟಿ ಹಾಕಿರುವ ವಿಚಾರದಲ್ಲಿ ತಂದೆ-ಮಗನ ನಡುವೆ ಸಂಘರ್ಷ ಏರ್ಪಟ್ಟಿತು. ಕುಪಿತಗೊಂಡ ತಂದೆ ವಿಶ್ವನಾಥ ಶೆಟ್ಟಿ, ಮಗ ಸ್ವಾಮಿತ್ ಶೆಟ್ಟಿ ಮೇಲೆ ದ್ವೇಷದಿಂದ ಮನೆಯ ಕೋಣೆಯೊಳಗೆ ಮಲಗಿದ್ದ ಪುತ್ರನ ಮೇಲೆ ಪೆಟ್ರೋಲ್ ಸುರಿದ ವಿಶ್ವನಾಥ ಶೆಟ್ಟಿ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದ. ಗಂಭೀರ ಗಾಯಗೊಂಡ ಶರ್ಮಿತ್ ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.