ಮಂಗಳೂರು, ಜು 02 (DaijiworldNews/PY): "ಕಾಂಗ್ರೆಸ್ ಮುಖಂಡರು, ಯುವಕರಿಗೆ ಚುನಾವಣೆಗೆ ಸ್ಪರ್ಧಿಸಲು ಹೆಚ್ಚಿನ ಅವಕಾಶ ನೀಡಬೇಕು" ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಚುನಾವಣೆಯಲ್ಲಿ ಪದೇ ಪದೇ ಹಳೆಯ ಮುಖಗಳಿಗೆ ಹೆಚ್ಚಿನ ಅವಕಾಶ ನೀಡುವ ಮೂಲಕ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ. ಕಳೆದ ಚುನಾವಣೆಯಲ್ಲಿ ನನ್ನ ಕ್ಷೇತ್ರದಲ್ಲಿ ಭಾರಿ ಸೋಲು ಎದುರಿಸಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನಾನು ಮಿಥುನ್ ರೈ ಹೆಸರನ್ನು ಶಿಫಾರಸ್ಸು ಮಾಡಿದ್ದೆ. ಏಕೆಂದರೆ, ನನಗೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ" ಎಂದು ತಿಳಿಸಿದ್ದಾರೆ.
"ಕೆಲವು ರಾಜಕಾರಣಿಗಳು ಯುವಕರಿಗೆ ಅವಕಾಶ ನೀಡುವುದನ್ನು ಮರೆತಿದ್ದಾರೆ. ಕಾಂಗ್ರೆಸ್ ಮತ್ತೆ ಪುಟಿದೇಳಬೇಕೆಂದರೆ ಯುವಕರಿಗೆ ಅವಕಾಶ ನೀಡಬೇಕು. ಇದರಿಂದ ರಾಜಕೀಯ ಬದಲಾವಾಣೆ ಆಗುತ್ತದೆ ಹಾಗೇ ಇದು ಯುವಕರಿಗೆ ಸ್ಪೂರ್ತಿ ನೀಡುತ್ತದೆ. ಬಿಜೆಪಿಯಲ್ಲಿ ಹೆಚ್ಚು ಯುವಕರಿಗೆ ಅವಕಾಶ ನೀಡಿದ್ದಾರೆ" ಎಂದಿದ್ದಾರೆ.
"ನಾನು, ಸೊರಕೆ ಹಾಗೂ ರಮಾನಾಥ್ ರೈ ಅವರು 35-40 ನೇ ವಯಸ್ಸಿನಲ್ಲಿ ಶಾಸಕರಾಗಿದ್ದವು. ಈಗ ಯುವಕರಿಗೆ ಶಾಸಕರಾಗಲು ಅವಕಾಶವಿದೆ. ಕಾಂಗ್ರೆಸ್ ಅದೇ ಹಳೆ ಮುಖಕ್ಕೆ ಆದ್ಯತೆ ನೀಡುತ್ತದೆ ಎಂದು ಹಲವರು ಅದೇ ಮನಸ್ಥಿತಿಯಲ್ಲಿದ್ದಾರೆ. ಹಾಗಾಗಿ ಯುವಕರಿಗೆ ಅವಕಾಶ ನೀಡಿ. ಪಕ್ಷ ಮತ್ತಷ್ಟು ಬಲಗೊಳ್ಳುತ್ತದೆ ಎಂದಿದ್ದಾರೆ.
ಮಿಲ್ಖಾ ಸಿಂಗ್ಗೆ ಸಂತಾಪ ಸೂಚಿಸಿದ ಜಿಲ್ಲಾ ಕಾಂಗ್ರೆಸ್: ಪದ್ಮಶ್ರೀ ಪುರಸ್ಕೃತ ಹಾಗೂ ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಂತಾಪ ಸೂಚಿಸಿದೆ.
"ಮಿಲ್ಖಾ ಸಿಂಗ್ ಅವರಂತ ಕ್ರೀಡಾಪಟುಗಳು ದಾಖಲೆ ನಿರ್ಮಸಲು ಕ್ರೀಡೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು" ಎಂದು ಜೈನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ವೇಳೆ ಅಭಯಚಂದ್ರ ಜೈನ್ ಅವರು, "ಮಂಗಳೂರಿನಲ್ಲಿ ಅತ್ಯುತ್ತಮ ಸ್ಟೇಡಿಯಂ ನಿರ್ಮಾಣವಾಗಬೇಕು" ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಸ ಹರೀಶ್ ಕುಮಾರ್, ಮುಖಂಡರಾದ ಶಾಹುಲ್ ಹಮೀದ್, ಪ್ರಕಾಶ್ ಸಾಲಿಯಾನ್, ಲಾರೆನ್ಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.