ಮಂಗಳೂರು, ಜು. 02 (DaijiworldNews/SM): ಬುದ್ಧಿವಂತರ ಜಿಲ್ಲೆ ದ.ಕ.ದ ಮಂಗಳೂರು ನಗರದಲ್ಲಿ ಮತ್ತೆ ಅಮಾನವೀಯ ಘಟನೆ ನಡೆದಿದೆ. ದುಷ್ಕರ್ಮಿಗಳು ಬೀದಿ ನಾಯಿಯೊಂದನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ.
ನಗರದ ಶಿವಭಾಗ್ ಎಂಬಲ್ಲಿ ಘಟನೆ ನಡೆದಿದೆ. ಸ್ಥಳೀಯರು ಸತ್ತು ಬಿದ್ದಿದ್ದ ನಾಯಿಯನ್ನು ಗಮನಿಸಿತ್ತು. ಆ ಸಂದರ್ಭದಲ್ಲಿ ಅದರ ದೇಹದಲ್ಲಿ ಗಾಯ ಕಂಡುಬಂದಿದೆ. ಬಳಿಕ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ನಾಯಿಯ ದೇಹದೊಳಗೆ ಗುಂಡು ಪತ್ತೆಯಾಗಿದೆ. ಯಾರೋ ಕಿಡಿಗೇಡಿಗಳು ನಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದು ತಿಳಿದುಬಂದಿದೆ.
ಇನ್ನು ಈ ಹಿಂದೆ ನಗರದಲ್ಲಿ ಬೈಕ್ ಗೆ ನಾಯಿಯನ್ನು ಕಟ್ಟಿ ಎಳೆದೊಯ್ದ ಎರಡು ಘಟನೆಗಳು ನಡೆದಿತ್ತು. ಇದೀಗ ಮತ್ತೊಂದು ದುಷ್ಕೃತ್ಯ ಎಸಗಲಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.