ಕುಂದಾಪುರ, ಜು 03 (DaijiworldNews/MS): ರಾಜಧಾನಿ ಬೆಂಗಳೂರಿನೊಂದಿಗೆ ಉಡುಪಿ,- ಪಡೀಲ್ - ಕುಂದಾಪುರ -ಕಾರವಾರ - ವಾಸ್ಕೋ ರೈಲಿಗೆ ಇನ್ನು ಮುಂದೆ "ಪಂಚಗಂಗಾ ಎಕ್ಸ್ಪ್ರೆಸ್" ಎಂದು ನಾಮಕರಣವಾಗಲಿದೆ. ಈ ಬಗ್ಗೆ ಕೇಂದ್ರ ರೈಲ್ವೇ ಸಚಿವಾಲಯ ಅಧಿಕೃತ ಆದೇಶ ಹೊರಡಿಸಿದೆ.
ಕರಾವಳಿಯ ಜೀವನಾಡಿಯಾದ ಉಡುಪಿ ಜಿಲ್ಲೆಯ ಐದು ಪ್ರಮುಖ ಪುಣ್ಯ ನದಿಗಳು ಸಂಗಮಿಸಿ ಸೃಷ್ಟಿಯಾಗುವ ಪ್ರಾಕೃತಿಕ ಅಚ್ಚರಿ ಪಂಚಗಂಗಾವಳಿ ನದಿಯ ಹೆಸರಿನಿಂದ ಆಯ್ದ ಪಂಚಗಂಗಾ ಎಕ್ಸ್ಪ್ರೆಸ್” ಎಂದು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಿತ್ತು.
ಅಲ್ಲದೆ ಈ ಬಗ್ಗೆ ಹಿಂದಿನ ರೈಲ್ವೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಕರಾವಳಿಯ ಬಹುಮುಖ್ಯ ಪುಣ್ಯ ಕ್ಷೇತ್ರಗಳ ಮೂಲಕ ಹರಿಯುವ ಪಂಚಗಂಗಾ, ಜಿಲ್ಲೆಯ ತೀರ್ಥ ಕ್ಷೇತ್ರ, ಪ್ರವಾಸೊದ್ಯಮ, ಮೀನುಗಾರಿಕೆ, ಕೃಷಿ ಹಾಗು ಜನಜೀವನಕ್ಕೆ ಅದಾರವಾಗಿದ್ದು, ಈ ಕಾರಣದಿಂದ ನೂತನ ಬೆಂಗಳೂರು-ಕಾರವಾರ ರೈಲಿಗೆ "ಪಂಚಗಂಗಾ" ಎನ್ನುವ ಹೆಸರಿಡಬೇಕು ಎಂದು ಕೇಳಿಕೊಳ್ಳಲಾಗಿತ್ತು.
ಜನರ ಅಪೇಕ್ಷೆಯನ್ನು ಗೌರವಿಸಿ, ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ "ಪಂಚ ಗಂಗಾ ಎಕ್ಸ್ಪ್ರೆಸ್" ಎಂಬ ಹೆಸರನ್ನು ಕರಾವಳಿಯ ಜೀವನಾಡಿಯದ ಬೆಂಗಳೂರು-ಕಾರವಾರ ರೈಲಿಗೆ ನಾಮಕರಣ ಮಾಡಿದ ಕೇಂದ್ರ ಸರಕಾರಕ್ಕೆ ಹಾಗು ರೈಲ್ವೆ ಸಚಿವಾಲಯ ಆದೇಶ ಮಾಡಿತ್ತು, ಸಂಸದೆ ಶೋಭಾ ಕರಂದ್ಲಾಜೆ ಧನ್ಯವಾದ ಸಲ್ಲಿಸಿದ್ದಾರೆ.