ಕಾಸರಗೋಡು, ಜು 03 (DaijiworldNews/MS): ಕೊರೋನಾ ನಿಯಂತ್ರಣಕ್ಕೆ ಬಂದಿದ್ದರೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡದಿರುವುದನ್ನು ಪ್ರತಿಭಟಿಸಿ ಮಂಗಳವಾರ ( 8) ಕೇರಳದಲ್ಲಿ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲು ವರ್ತಕರ ಸಮನ್ವಯ ಸಮಿತಿ ತೀರ್ಮಾನಿಸಿದೆ.
ಬೇಡಿಕೆ ಈಡೇರಿಸದಿದ್ದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಮುನ್ನೆಚ್ಚರಿಕೆ ನೀಡಿದೆ. ಕೋವಿಡ್ ಮಾನದಂಡಗಳನ್ನು ಪಾಲಿಸಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅನುಮತಿ ನೀಡಬೇಕು. ಕಳೆದ ಎರಡು ತಿಂಗಳಿಂದ ಬಹುತೇಕ ಅಂಗಡಿ ಮುಂಗಟ್ಟುಗಳು ಬಾಗಿಲು ಜಡಿದಿವೆ . ವರ್ತಕರು ಬೀದಿ ಪಾಲಾಗುತ್ತಿದ್ದಾರೆ. ಅಂಗಡಿಯಲ್ಲಿನ ಸಾಮಗ್ರಿಗಳು ಹಾಳಾಗಿ ಹೋಗುತ್ತಿದ್ದು , ಕೆಲವೇ ಕೆಲ ಅಂಗಡಿಗಳು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ .
ಮಾತ್ರವಲ್ಲದೆ ಬಹುತೇಕ ಕಡೆಗಳಲ್ಲಿ ಲಾಕ್ ಡೌನ್ ವಿಸ್ತರಿಸುತ್ತಿರುವುದರಿಂದ ಅಂಗಡಿ ಮುಂಗಟ್ಟುಗಳು ತೆರೆಯಲು ಅನುಮತಿ ಇಲ್ಲ . ಇದರಿಂದ ವರ್ತಕರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದು , ಈ ಹಿನ್ನಲೆಯಲ್ಲಿ ಸರಕಾರ ಕೂಡಲೇ ಗಮನ ನೀಡಬೇಕೆಂದು ಸಮಿತಿ ಒತ್ತಾಯಿಸಿದ್ದು , ಮಂಗಳವಾರ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು , ಸರಕಾರ ಗಮನ ಹರಿಸದಿದ್ದಲ್ಲಿ ಜುಲೈ 10 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ