ಉಡುಪಿ, ಜು 03 (DaijiworldNews/MS): ಸುಮಾರು 21 ವರ್ಷಗಳ ಹಿಂದೆ ತಾಯ್ನಾಡನ್ನು ತೊರೆದು ಸೌದಿಯಲ್ಲಿ ನೆಲೆಸಿದ್ದ ಬಳಿಕ ಅನಾರೋಗ್ಯದಿಂದ ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಸಂಘಟನೆಯೊಂದು ರಕ್ಷಣೆ ತಾಯ್ನಾಡಿಗೆ ಕರೆರತರುವಲ್ಲಿ ಯಶಸ್ವಿಯಾಗಿದೆ.
ಉಡುಪಿ ತೋನ್ಸೆ ಯ 68 ವರ್ಷದ ಪ್ರಭಾಕರ್ ಕಳೆದ ನಲ್ವತ್ತು ವರ್ಷಗಳಿಂದ ಸೌದಿ ಅರೇಬಿಯಾದ ದಮ್ಮಾಮ್ ನಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದು. 2000ನೇ ಇಸವಿಯಲ್ಲಿ ಕೊನೆಯ ಬಾರಿಗೆ ತಾಯ್ತಾಡಿಗೆ ಹೋಗಿ ಬಂದಿದ್ದರು. ನಂತರ ತವರಿಗೆ ಹಿಂದಿರುಗಿರಲಿಲ್ಲ. ಇತ್ತೀಚೆಗೆ ಅವರು ಗಂಭೀರ ರೋಗದಿಂದ ಬಳಲುತ್ತಿದ್ದರು. ಇಂಡಿಯನ್ ಸೋಶಿಯಲ್ ಫೋರಂ ಸತತ ಒಂದು ತಿಂಗಳ ಪ್ರಯತ್ನ ದ ನಂತರ ತವರಿಗೆ ಮರಳಿಸುವಲ್ಲಿ ಯಶಸ್ವಿಯಾಗಿದ್ದು 'ವಂದೇ ಭಾರತ್' ವಿಮಾನದ ಮೂಲಕ ಜೂನ್ ೨೬ ಕ್ಕೆ ಪ್ರಭಾಕರ್ ಮಂಗಳೂರಿಗೆ ಬಂದಿಳಿದ್ದಾರೆ.
ಕಳೆದ ತಿಂಗಳು ಸ್ಥಳೀಯ ವಾಟ್ಸಪ್ನಲ್ಲಿ ಪ್ರಭಾಕರ್ ರವರು ಚಿಂತಾಜನಕ ಸ್ಥಿತಿಯಲ್ಲಿರುವ ವಿಷಯ ಅವರ ಸಂಬಂಧಿಕರು ಶೇರ್ ಮಾಡಿದ್ದರು. ಆ ಆಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಸ್ಥಳೀಯ ಎಸ್.ಡಿ.ಪಿ.ಐ. ಪಕ್ಷದವರು ಸೌದಿಯ ಐ.ಎಸ್.ಎಫ್ ದಮ್ಮಾಂ ಘಟಕವನ್ನು ಸಂಪರ್ಕಿಸಿ ಸಹಾಯ ನೀಡಲು ಕೋರಿತ್ತು. ಮಾಹಿತಿ ಕಲೆ ಹಾಕಿದ ಇಂಡಿಯನ್ ಸೋಶಿಯಲ್ ಫೋರಂ ದಮ್ಮಾಮ್ ಘಟಕ ವೆಲ್ಫೇರ್ ವಿಭಾಗದ ಮುಹಮ್ಮದ್ ಅಲಿ ಮೂಳೂರು ರವರ ನೇತೃತ್ವದ ಲ್ಲಿ ಒಂದು ತಂಡ ರಚಿಸಿತು. ಅದರಂತೆ ಇಬ್ರಾಹೀಂ ಕೃಷ್ಣಾಪುರ ಹಾಗೂ ಇಮ್ರಾನ್ ಕಾಟಿಪಳ್ಳ ಜೊತೆಗೂಡಿ ದಮ್ಮಾಮ್ ನ ಸೀಕೊ(seiko)ದಲ್ಲಿ ಪ್ರಭಾಕರ್ ರವರನ್ನು ಅಸಹಾಯಕ ಸ್ಥಿತಿಯಲ್ಲಿ ಪತ್ತೆಮಾಡಿತ್ತು..
ನಾಲ್ಕು ವರ್ಷಗಳಿಂದ ಅವರ ಇಕಾಮಾ (identity card) ನವೀಕರಣಗೊಂಡಿರಲಿಲ್ಲ. ಈ ಸಂದರ್ಭದಲ್ಲಿ ತಕ್ಷಣವೇ ಐ.ಎಸ್.ಎಫ್ ಅವರನ್ನು ಅಲ್ ಖೋಬಾರ್ ನ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿಸಿ ಪ್ರಾರ್ಥಮಿಕ ಚಿಕಿತ್ಸೆಯ ಏರ್ಪಾಡು ಮಾಡಿತ್ತು. ಆದರೆ ಇಕಾಮ ಮತ್ತು ಆರೋಗ್ಯ ವಿಮೆ ಅವಧಿ ಮುಗಿದ ಕಾರಣ ಅವರನ್ನು ನಂತರ ಕಿಂಗ್ ಫಹದ್ ಯೂನಿವರ್ಸಿಟಿ ಆಸ್ಪತ್ರೆಗೆ ವರ್ಗಾಯಿಸಲು ವೆಲ್ಸ್ ತಂಡ ನಿರ್ಧರಿಸಿತು. ಅಲ್ಲಿ ಸುಮಾರು ಎರಡು ವಾರದವರೆಗೆ ಶುಶ್ರೂಷೆ ಮಾಡಿ ಆಸ್ಪತ್ರೆ ಅವರನ್ನು ಎಲ್ಲಾ ತರದ ಪರೀಕ್ಷೆಗೆ ಒಳಪಡಿಸಿ, ಅವರಿಗೆ ಗಂಭೀರ ಕಾಯಿಲೆ ಇರುವುದು ಅಲ್ಲಿನ ವೈದ್ಯರ ತಂಡ ಸ್ಪಷ್ಟ ಪಡಿಸಿತು. ಹೆಚ್ಚಿನ ಚಿಕಿತ್ಸೆಗಾಗಿ ತವರಿಗೆ ಮರಳಿಸುವುದು ಅನಿವಾರ್ಯವಾಗಿತ್ತು.
ಇನ್ನೊಂದು ಕಡೆ ಅವರ ಪ್ರಾಯೋಜಕ ರನ್ನು ಸಂಪರ್ಕಿಸಿದ ತಂಡ, ಅವರ ಪಾಸ್ ಪೋರ್ಟ್ ಅವಧಿ ಕೂಡಾ ಮುಗಿದಿದ್ದು, ನಂತರ ಐ.ಎಸ್.ಎಫ್. ತಕ್ಷಣವೇ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಪ್ರಭಾಕರ್ ಮಾಹಿತಿಯನ್ನು ಸ್ಥೂಲವಾಗಿ ವಿವರಿಸಿತು ಮತ್ತು ಊರಿಗೆ ತೆರಳಲು ಔಪಚಾರಿಕವಾಗಿ ಬೇಕಾದ ದಾಖಲೆ ಪತ್ರಗಳನ್ನು ಕೋರಿತ್ತು. ಅದರಂತೆ ತಕ್ಷಣ ಸ್ಪಂದಿಸಿದ ಭಾರತೀಯ ರಾಯಭಾರಿ ಕಚೇರಿ, ಔಪಚಾರಿಕವಾಗಿ ದೃಡೀಕರಣ ಪತ್ರವನ್ನು ಹಾಗೂ ಎಮರ್ಜೆನ್ಸಿ ಸರ್ಟಿಫಿಕೇಟ್ ಬಿಡುಗಡೆಗೊಳಿಸಿ ಊರಿಗೆ ಮರಳಲು ಅನುಕೂಲ ಮಾಡಿಕೊಟ್ಟಿತು. ನಿರಂತರ ಸೌದಿ ಕಾರ್ಮಿಕ ಸಚಿವಾಲಯದ ಸಂಪರ್ಕದಲ್ಲಿದ್ದ ವೆಲ್ಪೇರ್ ತಂಡ ಫೈನಲ್ ಎಕ್ಸಿಟ್ ಗೆ ಬೇಕಾದ ಏರ್ಪಾಟುಗಳನ್ನೂ ಕೂಡಾ ಮುಗಿಸಿತು.
ಪ್ರಭಾಕರ್ ತವರು ತಲುಪಿದ ಬಳಿಕ ಅವರ ಚಿಕಿತ್ಸೆಗೆ ಸಂಬಂಧಿಸಿದ ಏರ್ಪಾಟುಗಳನ್ನು ಮಾಡುವಂತೆ ಐ.ಎಸ್.ಎಫ್ ಸಮಿತಿ ಊರಿನ ಎಸ್.ಡಿ.ಪಿ.ಐ ಪಕ್ಷವನ್ನು ಕೋರಿದ್ದು ಪಕ್ಷದ ಕಾರ್ಯಕರ್ತರು ಅವರನ್ನು ವಿಮಾನ ನಿಲ್ದಾಣದಿಂದ ಆಂಬ್ಯುಲೆನ್ಸ್ ಮೂಲಕ ಎಂ.ಐ.ಒ ಆಸ್ಪತ್ರೆಗೆ ಕರೆದೊಯ್ದಿದ್ದು, ಸದ್ಯ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. .
ಎಂಎಎಸ್ಎ ಸಂಘಟನೆಯ ಅಧ್ಯಕ್ಷರಾದ ಸತೀಶ್ ಬಜಾಲ್, (sponsor) ಜಾಯ್ ಫೆರ್ನಾಂಡಿಸ್ ಹಾಗೂ ದಮ್ಮಾಮ್ ಹೆಲ್ತ್ ಕ್ಲಿನಿಕ್ ನ ವೈದ್ಯ ಡಾ.ಮುಹಮ್ಮದ್ ವಾಸೀಂ ಭಟ್ಕಳ್ ಇವರು ಟಿಕೆಟ್ ಹಾಗೂ ಇನ್ನಿತರ ಕೆಲಸಗಳಿಗೆ ಹಣಕಾಸಿನ ನೆರವು ನೀಡಿದ್ದು, ಭಾರತೀಯ ರಾಯಭಾರಿ ಕಚೇರಿಯ ತಕ್ಷಣದ ಸ್ಪಂದಿಸಿದ್ದಾರೆ ಎಂದು ಉಡುಪಿಯ ಎಸ್ ಡಿ ಪಿ ಐ ನ ಸದಸ್ಯರು ತಿಳಿಸಿದ್ದು ಈ ಸಂಘಟನೆಯ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ.