ಮಂಗಳೂರು, ಜು 03 (DaijiworldNews/PY): ಜಿಲ್ಲೆಯಲ್ಲಿ ಮಾನ್ಸೂನ್ ಆರಂಭವಾಗಿರುವುದರಿಂದ ಶಿಳ್ಯಕ್ಯಾತ ಸಮುದಾಯದವರ ಸುರಕ್ಷತೆ ಹಿತದೃಷ್ಟಿಯಿಂದ, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಜು.3ರ ಶನಿವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಟರ್ಪಾಲ್ಗಳನ್ನು ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳಿಗೆ ವಿತರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾದ ತೌಕ್ತೆ ಚಂಡಮಾರುತದ ಪ್ರಭಾವದಿಂದಾಗಿ ಅಲೆಮಾರಿ ಶಿಳ್ಳಕ್ಯಾತ ಕುಟುಂಬದ ಗುಡಿಸಲುಗಳು ಟರ್ಪಾಲ್ಗಳು ತೀವ್ರವಾಗಿ ಹಾನಿಯಾಗಿದ್ದವು.
ಜಿಲ್ಲೆಯಲ್ಲಿ ಮುಂಗಾರು ಮಳೆಯೂ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಈ ಸಮುದಾಯದವರಿಗೆ ಟರ್ಪಾಲ್ಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಭಗವಾನ್ ಸೋನಾವಣೆ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.