ಮಂಗಳೂರು, ಜು.03 (DaijiworldNews/HR): ಸ್ವಚ್ಛ ಭಾರತ್ ಮಿಷನ್ (ಗ್ರಾ), ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಪ್ಲಾಸ್ಟಿಕ್ ರಹಿತ ದಿನಾಚರಣೆಯನ್ನು ಆಚರಿಸಲಾಯಿತು.
ಜುಲೈ 3 ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ಸುರಕ್ಷತಾ ಕ್ರಮಗಳೊಂದಿಗೆ ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಪ್ರತಿಜ್ಞಾ ವಿಧಿ ಬೋಧಿಸಿ ಪ್ಲಾಸ್ಟಿಕ್ ರಹಿತ ಚೀಲ ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಇಲಾಖೆಯ ಮಾಹಿತಿ ಇರುವ ಕೈಪಿಡಿ, ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಭಗವಾನ್ ಸೋನಾವಣೆ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಕುಮಾರ್, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.