ಪುತ್ತೂರು, ಜು 04 (DaijiworldNews/PY): ನೆಟ್ಟಣಿಗೆ ಮುಡ್ನೂರಿನ ಯುವಕನೋರ್ವ ಹನಿಟ್ರ್ಯಾಪ್ಗೊಳಗಾಗಿ ಲಕ್ಷಾಂತರ ರೂ. ಕಳೆದುಕೊಂಡಿರುವ ಬಗ್ಗೆ 7 ಮಂದಿಯ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾನೆ.
ಈ ಸಂಬಂಧ ಪೊಲೀಸರು ಯುವತಿಯೋರ್ವಳನ್ನು ಬಂಧಿಸಿದ್ದಾರೆ.
ವೃತ್ತಿಯಲ್ಲಿ ಸೇಲ್ಸ್ಮ್ಯಾನ್ ಆಗಿರುವ ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎನ್ನುವವರ ಪುತ್ರ ಅಬ್ದುಲ್ ನಾಸೀರ್ (25) ಹನಿಟ್ರ್ಯಾಪ್ಗೊಳಗಾಗಿ 30 ಲಕ್ಷ ರೂ.ಗಳನ್ನು ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಎಪ್ರಿಲ್ 12ರಂದು ಈ ಘಟನೆ ನಡೆದಿದ್ದು, ಇದೀಗ ಪೊಲೀಸ್ ಮೇಲಾಧಿಕಾರಿಗಳ ಸೂಚನೆಯಂತೆ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಚೀಚಗದ್ದೆಯ ನಿವಾಸಿ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿ ನಿವಾಸಿ ಮೊಹಮ್ಮದ್ ಕುಂಞಿ, ಕೊಟ್ಯಾಡಿ ನಿವಾಸಿ ಶಾಫಿ, ಸವಣೂರಿನ ಅಝಾರ್, ಸಯೀದ್ ಮೋನು, ನಾಸಿರ್ ಮತ್ತು ಕಾರ್ಕಳದ ತನೀಶಾ ಎಂದು ಪರಿಚಯಿಸಿಕೊಂಡಿದ್ದವರ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾರೆ.
ತನಿಖೆ ಕೈಗೆತ್ತಿಕೊಂಡ ಉಪವಿಭಾಗದ ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ನೇತೃತ್ವದ ಪೊಲೀಸರು ಪ್ರಕರಣದ ಆರೋಪಿಗಳ ಪೈಕಿ ತನೀಶಾ ಎಂವರ್ನು ಬಂಧಿಸಿದ್ದಾರೆ. ಉಳಿಸದ ಆರು ಮಂದಿ ಆರೋಪಿಗಳು ಪರಾರಿಯಾಗಿದ್ದಾರೆ.