ಪುತ್ತೂರು, ಜು. 4 (DaijiworldNews/HR): ಅಕ್ರಮವಾಗಿ ಮದ್ಯ ಮಾರಾಟ ಮಾಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕೆಮ್ಮಿಂಜೆ ಗ್ರಾಮದ ನಿವಾಸಿ ಬಾಬು ಪೂಜಾರಿ (48) ಮತ್ತು ಗಣೇಶ (32) ಎಂದು ಗುರುತಿಸಲಾಗಿದೆ.
ಮಾಹಿತಿಯ ಮೇರೆಗೆ ನಗರ ಪೊಲೀಸ್ ಠಾಣೆಯ ಎಎಸ್ಐ ಜಂಬುರಾಜ್ ಮಹಾಜನ್ ಅವರು ಕೆಮ್ಮಿಂಜೆ ಗ್ರಾಮದ ಕಲ್ಲಗುದ್ದೆ ಮೇಲೆ ದಾಳಿ ನಡೆಸಿದ್ದು, ಅಲ್ಲಿ ಬಾಬು ಮತ್ತು ಗಣೇಶ ಅವರು ಯಾವುದೇ ಅನುಮತಿಯಿಲ್ಲದೆ ಭಾರತೀಯ ನಿರ್ಮಿತ ವಿದೇಶಿ ಮದ್ಯ (ಐಎಂಎಫ್ಎಲ್) ಮತ್ತು ಬಿಯರ್ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಪೊಲೀಸರು ಆರೋಪಿಗಳನ್ನು ಬಂಧಿಸಿ ನೂರಾರು ಮದ್ಯದ ಬಾಟಲಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಜಪ್ತಿ ಮಾಡಿದ ಒಟ್ಟು ಮದ್ಯ ಮತ್ತು ನಗದು ಮೌಲ್ಯ 26,118 ರೂ. ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.