ಮಂಗಳೂರು, ಜು. 4 (DaijiworldNews/HR): ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ರಾಜೀವನಗರದಲ್ಲಿ ಕಾರ್ಮಿಕರಿಗೆ ಉಚಿತ ಲಸಿಕೆ ವಿತರಣಾ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, "ರಾಜೀವನಗರದಲ್ಲಿ ಕಾರ್ಮಿಕರಿಗಾಗಿ ಉಚಿತ ಲಸಿಕೆ ವಿತರಿಸಲಾಗುತ್ತಿದ್ದು ಸಾರ್ವಜನಿಕರು ಲಸಿಕೆ ಪಡೆದುಕೊಳ್ಳಬೇಕು. ಲಾಕ್ ಡೌನ್ ಸಡಿಲಗೊಳಿಸಿದರೂ ಸ್ವಲ್ಪ ಸಮಯದವರೆಗೆ ಆರೋಗ್ಯದ ಹಿತದೃಷ್ಟಿಯಿಂದ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು" ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಕಿಶೋರ್ ಕೊಟ್ಟಾರಿ, ವೈದ್ಯಾಧಿಕಾರಿ ಡಾ ದೀಪ್ತಿ, ಪ್ರಮುಖರಾದ ನೀಲೆಶ್ ಕಾಮತ್, ವಾಸುದೇವ, ಅಶ್ವಿತ್ ಕೊಟ್ಟಾರಿ, ಹರೀಶ್ ರೈ, ರೀತೇಶ್, ಉಮೇಶ್, ಚಂದ್ರ, ಮಣಿ, ಮಾಧವ ಭಟ್, ದೇವಿ ಪ್ರಸಾದ್, ಮೋಹಿತ್ ಮುಂತಾದವರು ಉಪಸ್ಥಿತರಿದ್ದರು.