ಮಂಗಳೂರು, ಜು. 05 (DaijiworldNews/SM): ಮೀನುಗಾರಿಕೆ ಇಲ್ಲದಿದ್ದರೆ ಮಂಗಳೂರಿಗೆ ಬೆಲೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕರಾವಳಿ ಭೇಟಿ ವೇಳೆ ಮಂಗಳೂರಿನಲ್ಲಿ ಮಾತನಾಡಿರುವ ಅವರು, ಮೊಗವೀರರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಬಂದಿದ್ದೇನೆ. ಪಕ್ಷದ ಕಾರ್ಯಕ್ರಮದ ಸಲುವಾಗಿ ಬಂದಿಲ್ಲ. ಈಗಾಗಲೇ ಮೀನುಗಾರರು, ಮೊಗವೀರರ ಜೊತೆ ಮಾತನಾಡಿದ್ದೇನೆ.
ಮಂಗಳೂರಿನಲ್ಲಿ ಮೀನುಗಾರಿಕೆ ಇಲ್ಲದಿದ್ದಲ್ಲಿ ಮಂಗಳೂರಿಗೆ ಬೆಲೆ ಇಲ್ಲ ಎಂದು ಅವರು ಹೇಳಿದ್ದಾರೆ.