ಪುತ್ತೂರು, ಜು. 05 (DaijiworldNews/SM): ತಾಲೂಕಿನ ಉಪ್ಪಿನಂಗಡಿಯ ನೇತ್ರಾವತಿ ನದಿ ನೀರಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ನಡೆದಿದೆ. ನಿಂಗರಾಜು(15) ಮತ್ತು ಸತೀಶ್(13) ಮೃತಪಟ್ಟ ಬಾಲಕರಾಗಿದ್ದಾರೆ.
ಮೃತರು ಸ್ನಾನ ಮಾಡಲೆಂದು ನೇತ್ರಾವತಿ ನದಿ ನೀರಿಗೆ ಇಳಿದಿದ್ದರು. ಆ ಸಂದರ್ಭದಲ್ಲಿ ನದಿಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.