ಕಾಸರಗೋಡು, ಜು. 05 (DaijiworldNews/SM): ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಉಂಟಾದ ಅಪಘಾತದಲ್ಲಿ ಕುಂಬಳೆ ನಿವಾಸಿಯೋರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಗಂಭೀರ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 8.30ರ ಸುಮಾರಿಗೆ ಕಾಞಂಗಾಡ್ ಸೌತ್ ನಲ್ಲಿ ಅಪಘಾತ ನಡೆದಿದೆ. ಮೃತಪಟ್ಟವರನ್ನು ಕುಂಬಳೆ ಆರಿಕ್ಕಾಡಿಯ ಅಲಿ(32) ಗುರುತಿಸಲಾಗಿದೆ. ಕುಂಬಳೆಯ ಅಲಿ(38) ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಬ್ಬರೂ ಕಾರು ಪ್ರಯಾಣಿಕರಾಗಿದ್ದಾರೆ.
ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ಪ್ರಯಾಣಿಕರಾದ ಐವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ನೀಲೇಶ್ವರದಿಂದ ಕಾಞಂಗಾಡ್ ಗೆ ಆಗಮಿಸುತ್ತಿದ್ದ ಬಸ್ಸು ಮತ್ತು ಕುಂಬಳೆಯಿಂದ ಕಣ್ಣೂರಿಗೆ ತೆರಳುತ್ತಿದ್ದ ಇನೋವಾ ಕಾರಿನ ನಡುವೆ ಅಪಘಾತ ನಡೆದಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕಾಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಪೊಲೀಸರು, ನಾಗರಿಕರು ಕಾರಿನಲ್ಲಿ ಸಿಲುಕಿದವರನ್ನು ಹೊರ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಗಂಟೆಗೂ ಅಧಿಕ ಸಮಯ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತು.
ಘಟನೆಯ ಕುರಿತಂತೆ ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.