ಉಡುಪಿ, ಜು.06(DaijiworldNews/HR):ವಿಧಾನಸಭೆಯಲ್ಲಿ ಮೀನುಗಾರರ ಸಮಸ್ಯೆ ಬಗ್ಗೆ ಚರ್ಚಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಮೀನುಗಾರ ಮುಖಂಡರೊಂದಿಗೆ ಎರಡು ಗಂಟೆಗಳ ಸಭೆ ನಡೆಸಿ ಸಮಸ್ಯೆ ಆಲಿಸಿ ಬಳಿಕ ಮಾತನಾಡಿದ ಅವರು, "ಮೀನುಗಾರರ ಸಮಸ್ಯೆಯನ್ನು ಹೇಳಿಕೊಳ್ಳುವುದಕ್ಕೆ ಮುಖ್ಯಮಂತ್ರಿಗಳ ಭೇಟಿಯಾದರೆ ಅದು ಲೆಕ್ಕಕ್ಕೆ ಬರುವುದಿಲ್ಲ, ಈ ಬಗ್ಗೆ ನಾನು ವಿಧಾನಸಭೆಯಲ್ಲಿ ಮೀನುಗಾರರ ಸಮಸ್ಯೆ ಬಗ್ಗೆ ಚರ್ಚಿಸಿ, ನಿಮಗೆ ಧ್ವನಿಗೆ ಸದನದಲ್ಲಿನ ಬೆಲೆ ಕೊಡಿಸುತ್ತೇನೆ" ಎಂದಿದ್ದಾರೆ.
ಇನ್ನು ಕರ್ನಾಟಕ ಸರಕಾರ ಮೀನುಗಾರರ ಸಮಸ್ಯೆ ನಿವಾರಿಸುತ್ತದೆ ಎಂಬ ನಂಬಿಕೆ ಇಲ್ಲ. ಮುಂದಿನ ಅವಧಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ಮೀನುಗಾರಿಕೆ ವಿಚಾರದಲ್ಲಿ ರಾಷ್ಟ್ರದಲ್ಲಿ ಏಕರೂಪಿ ಕಾನೂನು ತಂದು ಎಲ್ಲಾ ರಾಜ್ಯಗಳ ಜೊತೆ ಸಮಾಲೋಚನೆ ನಡೆಸಿ ಮೀನುಗಾರರ ಪೆನ್ಶನ್, ಡೀಸೆಲ್ ಸಬ್ಸಿಡಿ, ಆಶ್ರಯ ಮನೆ, ಸಿಆರ್ ಝಡ್ ಸಮಸ್ಯೆ ಬಗೆಹರಿಸುತ್ತೇವೆ" ಎಂದು ಭರವಸೆ ನೀಡಿದ್ದಾರೆ.