ಕುಂದಾಪುರ, ಜು. 06 (DaijiworldNews/SM): ತಾಲೂಕು ಬಸ್ರೂರು ಮೂಡ್ಕೇರಿ ಕೋಟಿಚೆನ್ನಯ್ಯ ಪಂಜುರ್ಲಿ ಗರಡಿಗೆ ಜುಲೈ 6ರಂದು ಸಂಜೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು.
ಗರಡಿಯ ವತಿಯಿಂದ ಗರಡಿಯ ಪಾತ್ರಿಗಳಾದ ಗೋಪಾಲ ಪೂಜಾರಿ ಅವರು ಮಲ್ಲಿಗೆಯ ಹಾರ ತೊಡಿಸಿ ಗರಡಿಗೆ ಸ್ವಾಗತಿಸಿಕೊಂಡರು. ಗರಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು. ಬಿಲ್ಲವ ಸಂಘದ ವತಿಯಿಂದ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ ಸೊರಕೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರು. ಕುಂದಾಪುರ ಕ್ಷೇತ್ರ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಬೈಂದೂರು ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ರಾಜು ಪೂಜಾರಿ, ವಿಕಾಸ್ ಹೆಗ್ಡೆ , ಕುಂದಾಪುರ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಅವರು ಯಡಮೊಗೆಯಲ್ಲಿ ಜೂ.5ರಂದು ಹತ್ಯೆಯಾದ ಉದಯ ಗಾಣಿಗ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.