ಉಳ್ಳಾಲ, ಜು 07 (DaijiworldNews/MS): ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿಉಳ್ಳಾಲ ಪೊಲೀಸರು ಓರ್ವನನ್ನು ಬಂಧಿಸಿ, 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ನಗರಸಭಾ ವ್ಯಾಪ್ತಿಯ ಕೋಟೆಪುರದಲ್ಲಿ ಮರಳು ತುಂಬಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ದಾಳಿ ನಡೆಸಿದ್ದರು. ಈ ವೇಳೆ ಕೋಟೆಪುರ ನಿವಾಸಿ ಶೌಕತ್ (35) ಬಂಧಿಸಿದ್ದು ಉಳಿದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮರಳು ಸಹಿತ ಕೃತ್ಯಕ್ಕೆ ಬಳಸಿದ ನಾಲ್ಕು ಲಾರಿ, ಎರಡು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.