ಉಡುಪಿ, ಜು.11 (DaijiworldNews/HR): ಉಡುಪಿಯ ಪ್ರಸಿದ್ದ ಯಾತ್ರಾ ಸ್ಥಳ ಉಡುಪಿ ಕೃಷ್ಣ ಮಠದಲ್ಲಿ ಇಂದಿನಿಂದ ಭಕ್ತಾಧಿಗಳಿಗೆ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
ಪ್ರತಿದಿನ ಮದ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೃಷ್ಣ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮೊದಲ ದಿನವಾದ ಇಂದು ನೂರಾರು ಮಂದಿ ಭಕ್ತರು ದೇವರ ದರ್ಶನ ಪಡೆದಿದ್ದಾರೆ.
ಉಡುಪಿ ಮತ್ತು ಅಸುಪಾಸಿನ ಭಕ್ತರು ಸೇರಿದಂತೆ ಹೊರ ಜಿಲ್ಲೆಗಳ ಭಕ್ತರು ಕೂಡಾ ಆಗಮಿಸಿ ಕೃಷ್ಣ ದೇವರ ದರ್ಶನ ಪಡೆದರು.
ದೇವಸ್ಥಾನ ಪ್ರವೇಶ ಮಾಡುವ ಸಂಧರ್ಭದಲ್ಲಿ ಎಲ್ಲಾ ಭಕ್ತರಿಗೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಸಾಮಾಜಿಕ ಅಂತರವನ್ನು ಪಾಲಿಸಿ ದರ್ಶನಕ್ಕೆ ಅವಕಾಶ ಮಾಡಿದ್ದು ಇದನ್ನು ಕಡ್ಡಾಯವಾಗಿ ಪಾಲಿಸುವಂತೆ ಭಕ್ತರಿಗೆ ಮಾರ್ಗದರ್ಶನ ಮಾಡಲಾಗುತ್ತಿದೆ.
ಇನ್ನು ದೇವಸ್ಥಾನದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಸೇವೆಗಳಿಗೆ ಅವಕಾಶ ಇಲ್ಲ.