ಕಾಸರಗೋಡು, ಜು. 12 (DaijiworldNews/HR): ಕೇರಳದ ವಂಡಿಪೆರಿಯಾರ್ನಲ್ಲಿ ಆರು ವರ್ಷದ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಭಾರತೀಯ ಮಹಿಳಾ ಮೋರ್ಚಾ ಜಿಲ್ಲಾ ಸಮಿತಿ ನೇತ್ಥತ್ವದಲ್ಲಿ ಇಂದು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಯಿತು.
ನಗರಸಭಾ ಸದಸ್ಯೆ ಸವಿತಾ ಟೀಚರ್ ಧರಣಿಯನ್ನು ಉದ್ಘಾಟಿಸಿದರು.
ಮಹಿಳಾ ಮೋರ್ಚಾ ಮಂಡಲ ಕಾರ್ಯದರ್ಶಿ ಕಾರ್ಯದರ್ಶಿ ಪುಷ್ಪಾ ಗೋಪಾಲನ್ ಅಧ್ಯಕ್ಷತೆ ವಹಿಸಿದ್ದರು.
ಶ್ರೀಲತಾ ಟೀಚರ್, ಉಮಾ ಎಂ, ಜನನಿ, ಉಷಾ ಮೊದಲಾದವರು ನೇತೃತ್ವ ನೀಡಿದರು.