ಪಣಂಬೂರು, ಜು.13 (DaijiworldNews/HR): ಪಣಂಬೂರು ಪೊಲೀಸ್ ಠಾಣೆಯಲ್ಲಿ ಜುಲೈ 12 ರಂದು ವರದಿಯಾಗಿದ್ದ ಮನೆಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳಗಿನ ತೂಕೂರು ಎಂಬಲ್ಲಿ ಮನೆಕಳ್ಳತನ ಮಾಡಿ ಚಿನ್ನಾಭರಣ ಸ್ವತ್ತು ಮತ್ತು ನಗದು ಹಣ ಕಳ್ಳತನ ಮಾಡಿದ್ದ ಆರೋಪಿಯನ್ನು ಮೇಲಾಧಿಕಾರಿಗಳ ನಿರ್ದೇಶನದಂತೆ ಕೆಲವೇ ಗಂಟೆಗಳಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ನೇತೃತ್ವದ ಪೊಲೀಸ್ ತಂಡ ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂದಿಸಿದಂತೆ ಬಂಧಿತನಿಂದ ರೂಪಾಯಿ 11,06,270 ಮೌಲ್ಯದ ಸುಮಾರು 248.600 ಗ್ರಾಂ ತೂಕದ ಚಿನ್ನಾಭರಣ ಹಾಗೂ ನಗದು ಹಣ ಸೇರಿದಂತೆ ಒಟ್ಟು 11,11,270 ಮೌಲ್ಯದ ಚಿನ್ನಾಭರಣ ಸ್ವತ್ತು ಗಳನ್ನು ವಶಪಡಿಸಿಕೊಂಡಿದ್ದಾರೆ".
ಆರೋಪಿಯು ಪಣಂಬೂರು ಠಾಣಾ ವ್ಯಾಪ್ತಿಯ ಕೆಳಗಿನ ತೂಕೂರು ಎಂಬಲ್ಲಿಯ ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
"ಈ ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಪತ್ತೆ ಮಾಡಿ ಚಿನ್ನಾಭರಣ ಸ್ವತ್ತುಗಳನ್ನು ಅತೀ ಶೀಘ್ರವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಈ ಪ್ರಕರಣದ ದೂರುದಾರರ ಮನೆಯ ನೆರೆಯ ಮನೆಯಲ್ಲಿ ವಾಸವಾಗಿದ್ದು ದೂರುದಾರರ ಮನೆಯಲ್ಲಿ ನಿಕಟಸಂಪರ್ಕಹೊಂದಿದ್ದು ದೂರುದಾರರ ಮನೆಯ ಸದಸ್ಯರ ವಿಶ್ವಾಸಗಳಿಸಿ ಮನೆಯ ವಿಚಾರಗಳನ್ನು ತಿಳಿದುಕೊಂಡು ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ."
ಇನ್ನು ದೂರುದಾರರ ಮನೆಯವರು 2 ದಿನ ಮನೆಯಲ್ಲಿ ಇಲ್ಲದೇ ಇದ್ದ ಸಂದರ್ಭದಲ್ಲಿ ಮನೆಯ ಹಂಚನ್ನು ತೆಗೆದು ಒಳಗೆ ಹೋಗಿ ಕಳ್ಳತನ ನಡೆಸಿದ್ದಾನೆ ಎಂಬುದು ಪ್ರಕರಣದ ತನಿಖೆಯಿಂದ ತಿಳಿದುಬಂದಿದೆ.
ಈ ಪ್ರಕರಣದ ಪತ್ತೆ ಕಾರ್ಯವು ಮಂಗಳೂರು ನಗರದ ಮಾನ್ಯ ಪೊಲೀಸು ಆಯುಕ್ತರಾದ ಎನ್. ಶಶಿಕುಮಾರ್, ಐ.ಪಿ.ಎಸ್ ರವರ ನಿರ್ದೇಶನದಂತೆ ಹರಿರಾಂ ಶಂಕರ್, ಐ.ಪಿ.ಎಸ್, ಮಂಗಳೂರು ನಗರ ಪೊಲೀಸ್ ಉಪ ಆಯುಕ್ತರು ದಿನೇಶ್ ಕುಮಾರ್ ಬಾರಿಕೆ, ಪೊಲೀಸ್ ಉಪ-ಆಯುಕ್ತರು ಮತ್ತು ಮಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಎಸ್. ಮಹೇಶ್ ಕುಮಾರ್ ಇವರ ನೇತೃತ್ವದಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಅಝಮತ್ ಆಲಿ, ಪೊಲೀಸ್ ಉಪ ನಿರೀಕ್ಷಕರಾದ ಉಮೇಶ್ ಕುಮಾರ್.ಎಂ.ಎನ್ ಮತ್ತು ಕುಮಾರೇಶನ್, ಪ್ರೋ. ಪೊಲೀಸ್ ಉಪ ನಿರೀಕ್ಷಕರಾದ ಶ್ರೀ ಮನೋಹರ್ ಪ್ರಸಾದ್ ಹಾಗೂ ಪಣಂಬೂರು ಪೊಲೀಸ್ ಠಾಣಾ ಎ.ಎಸ್.ಐ ಕೃಷ್ಣ ಹಾಗೂ ಸಿಬ್ಬಂಧಿಗಳಾದ ಡೇವಿಡ್ ಡಿ.ಸೋಜಾ, ಕಮಲಾಕ, ಚಂದ್ರಹಾಸ್ ಆಳ್ವಾ, ದಾದಸಾಬ್ ಹಾಗೂ ಇತರರು ಭಾಗವಹಿಸಿದ್ದರು.