ಮಂಗಳೂರು, ಜು. 12 (DaijiworldNews/SM): ಕೇರಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸುವವರ ತಪಾಸಣೆ ತೀವ್ರಗೊಳಿಸಲಾಗಿದ್ದು, ಈ ನಡುವೆ ಕನಿಷ್ಟ ಒಂದು ಡೋಸ್ ಲಸಿಕೆ ಪಡೆದವರಿಗೆ ಮಂಗಳೂರಿಗೆ ಆಗಮಿಸಲು ಅವಕಾಶ ನೀಡಲಾಗುವುದೆಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ದೈಜಿವರ್ಲ್ಡ್ ಗೆ ಪ್ರತಿಕ್ರಿಯೆ ನೀಡಿರುವ ಅವರು, ಮಂಗಳೂರಿಗೆ ಅಗಮಿಸುವವರು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಹೊಂದಿರಬೇಕು. ಇದನ್ನು ಪತ್ತೆ ಹಚ್ಚಲು ಗಡಿಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಮಂಗಳೂರಿಗೆ ವಿವಿಧ ಉದ್ದೇಶಗಳಿಂದ ಆಗಮಿಸುವವರಿಗೆ ನಮ್ಮದು ಯಾವುದೇ ಅಭ್ಯಂತರವಿಲ್ಲ. ಆದರೆ, ಕನಿಷ್ಟ ಒಂದು ಡೋಸ್ ಲಸಿಕೆಯಾದರೂ, ಪಡೆದಿರಲೇ ಬೇಕೆಂದು ಹರಿರಾಂ ಶಂಕರ್ ತಿಳಿಸಿದ್ದಾರೆ.