ಕಾಸರಗೋಡು, ಜು 14 (DaijiworldNews/PY): ಕೊರೊನಾ ಹಿನ್ನಲೆಯಲ್ಲಿ ಸ್ಥಗಿತಗೊಂಡಿರುವ ಕಾಸರಗೋಡು - ಮಂಗಳೂರು ನಡುವಿನ ಕೆಎಸ್ಆರ್ಟಿಸಿ ಬಸ್ಸು ಸಂಚಾರ ಪುನರಾರಂಭ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸುವುದಾಗಿ ಎಂದು ನೂತನ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಉದ್ಯೋಗ ಸೇರಿದಂತೆ ಇನ್ನಿತರ ಅಗತ್ಯಗಳಿಗಾಗಿ ಗಡಿಯ ಕಾಸರಗೋಡು ಜಿಲ್ಲೆಯ ಸಾವಿರಾರು ಮಂದಿ ದಿನಂಪ್ರತಿ ಮಂಗಳೂರಿಗೆ ತೆರಳುತ್ತಿದ್ದಾರೆ. ಮಂಗಳೂರಿಗೆ ನೇರ ಬಸ್ಸು ಸಂಚಾರ ಸ್ಥಗಿತಗೊಂಡಿರುವುದರಿಂದ ಜಿಲ್ಲೆಯ ಪ್ರಯಾಣಿಕರು ಸಮಸ್ಯೆಗೆ ಒಳಗಾಗಿದ್ದು , ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದರು.