ಉಳ್ಳಾಲ, ಜು. 14 (DaijiworldNews/SM): ರಸ್ತೆ ಬದಿಯಲ್ಲಿ ಕಸ ಎಸೆದು ಹೋಗಿದ್ದ ವ್ಯಕ್ತಿಯ ವಿರುದ್ಧ ಸಾರ್ವಜನಿಕರು ಗ್ರಾಮ ಪಂಚಾಯತ್ ಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ನವರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ, ಕಸ ಎಸೆದ ವ್ಯಕ್ತಿಯಿಂದಲೇ ಕಸ ಹೆಕ್ಕಿಸಿದ ಘಟನೆ ಇಲ್ಲಿನ ಕಿನ್ಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ಕಿನ್ಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಕೇಶ ತಿರುವು ಬಳಿ ಕಿನ್ಯಾ ಗ್ರಾಮ ಪಂಚಾಯಿತಿನಲ್ಲಿ ದೂರು ನೀಡಲಾಗಿತ್ತು. ವಾಹನ ಯಆಧಾರದಡಿ ಉಳ್ಳಾಲ ಪೊಲೀಸ್ ಠಾಣೆಗೆ ಆರೋಪಿ ವಿರುದ್ಧ ದೂರು ನೀಡಲಾಗಿತ್ತು. ಹಾಗೂ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಕಸ ಎಸೆದವನಿಂದಲೇ ಮತ್ತೆ ಕಸವನ್ನು ತೆರವುಗೊಳಿಸಲಾಗಿದೆ.
ಜು.11 ರಂದು ಇರ್ಫಾನ್ ಎನ್ನುವ ವ್ಯಕ್ತಿ ದ್ವಿಚಕ್ರ ವಾಹನದಲ್ಲಿ ಬಂದು ಗೋಣಿಚೀಲದಲ್ಲಿ ತ್ಯಾಜ್ಯ ತಂದು ಎಸೆಯುವಾಗಲೇ ಸಾರ್ವಜನಿಕರು ಫೋಟೊ ತೆಗೆದಿದ್ದರು. ಈ ಪೋಟೋವನ್ನು ಸ್ಥಳೀಯರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಲ್ಲದೆ, ಕಿನ್ಯಾ ಪಂಚಾಯತ್ಗೂ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಪೊಲೀಸರು ಫೋಟೋದಲ್ಲಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡು, ವಾಹನ ಮಾಲೀಕ ಬದ್ರುದ್ದೀನ್ ಇರ್ಫಾನ್ ಉಳ್ಳಾಲ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ ದಂಡ ಹಾಕಲಾಗಿದೆ.