ಮಂಗಳೂರು, ಜು. 14 (DaijiworldNews/SM): ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಬಗ್ಗೆ ಅಶ್ಲೀಲ ಪದ ಬಳಸಿ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನ ಮಾಡಿದ ಆರೋಪಿ ಕ್ಷೇತ್ರಕ್ಕೆ ತೆರಳಿ ಕ್ಷಮೆಯಾಚಿಸಿದ್ದಾನೆ.
ಅವಹೇಳನ ಮಾಡಿದ್ದ ಆರೋಪಿ ಆಲ್ಬರ್ಟ್ ಫೆರ್ನಾಂಡಿಸ್ ಕಟೀಲು ಕ್ಷೇತ್ರಕ್ಕೆ ತೆರಳಿ ಕ್ಷಮೆಯಾಚಿಸಿದ್ದಾನೆ. ಕಟೀಲು ಕ್ಷೇತ್ರದಲ್ಲಿ ತಾನು ಮಾಡಿದ ತಪ್ಪು ಎಂದು ಕಣ್ಣೀರಿಟ್ಟು ಕ್ಷಮೆಯಾಚಿಸಿದ್ದಾರೆ. ಬಜ್ಪೆ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. ಮೂಲತಃ ಬಜ್ಪೆ ನಿವಾಸಿಯಾಗಿರುವ ಇವರು ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದರು.
ಆಲ್ಬರ್ಟ್ ಫೆರ್ನಾಂಡಿಸ್ ಅವರು ಕಟೀಲು ಕ್ಷೇತ್ರದ ಬಗ್ಗೆ ಅವಹೇಳನಕಾರಿಯಾದ ಪದಗಳನ್ನು ಬಳಸಿದ್ದರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಕ್ಷೇತ್ರಕ್ಕೆ ಭೇಟಿ ನೀಡಿದ ಆಲ್ಬರ್ಟ್ ಫೆರ್ನಾಂಡಿಸ್ ಕಟೀಲು ದೇವಿಯ ಮುಂದೆ ಕೈಮುಗಿ ಕ್ಷಮೆಯಾಚಿಸಿದ್ದಾರೆ.