ಉಡುಪಿ, ಜು.15 (DaijiworldNews/HR): ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನವು, ಉಡುಪಿಯಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ತರಬೇತಿ ಕಾರ್ಯಕ್ರಮವು ಜುಲೈ 20ರಿಂದ ಆರಂಭಗೊಳ್ಳಲಿದೆ.
ಸಾಂಧರ್ಭಿಕ ಚಿತ್ರ
ಕಳೆದ 4 ವರ್ಷಗಳಿಂದ ಉಡುಪಿಯ ಸೋದೆ ಮಠದಲ್ಲಿ ಸಮರ್ಥ ಯಕ್ಷಗುರು ರಾಕೇಶ್ ರೈ ಅಡ್ಕ ಇವರ ಮೂಲಕ ಸುಮಾರು 80 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದೆ. ತರಬೇತಿ ಉಚಿತವಾಗಿದ್ದು, ಹೊಸ ತರಗತಿಯ ಸಮಯ ಪ್ರತೀ ಮಂಗಳವಾರ ಸಂಜೆ ಗಂಟೆ 5.00ರಿಂದ 6.00ರವರೆಗೆ ನೀಡಲಿದ್ದಾರೆ.
ಪ್ರತಿಷ್ಠಾನದ ಈ ಸತ್ಕಾರ್ಯಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭ ಶ್ರೀಪಾದರು ತಮ್ಮ ಮಠದಲ್ಲಿ ಸ್ಥಳಾವಕಾಶವನ್ನು ಕಲ್ಪಿಸಿಕೊಟ್ಟು ಈ ಕಾರ್ಯವನ್ನು ಪೋಷಿಸುತ್ತಾ ಬಹುವಾಗಿ ಅನುಗ್ರಹಿಸುತ್ತಿದ್ದಾರೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪ್ರತಿಷ್ಠಾನದ ವತಿಯಿಂದ ಕೋರಲಾಗಿದೆ. ವಯಸ್ಸಿನ ಮಿತಿಯಿಲ್ಲದೆ ಆಸಕ್ತರು ನೇರವಾಗಿ ಮಂಗಳವಾರದಂದು ತರಗತಿಗೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ, ಉಡುಪಿ ಸಂಪರ್ಕಿಸಬಹುದು.