ಕಾಸರಗೋಡು, ಜು 15 (DaijiworldNews/PY): "ಭೂ ಅತಿಕ್ರಮಣಕಾರರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಕೇರಳ ಕಂದಾಯ ಸಚಿವ ಕೆ.ರಾಜನ್ ಹೇಳಿದರು.
ಅವರು ಗುರುವಾರ ಕಾಸರಗೋಡು ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
"ಅತಿಕ್ರಮಣಕಾರರು ಎಷ್ಟು ಉನ್ನತ ಸ್ಥಾನದಲ್ಲಿದ್ದರೂ ಅವರ ಭೂಮಿಯನ್ನು ಸ್ವಾಧೀನಪಡಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಹೇಳಿದರು.
"ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಿಗಳ ಬಗ್ಗೆ ನಿಗಾ ಇರಿಸಲಾಗುವುದು. ಇಂತಹ ಅಧಿಕಾರಿಗಳನ್ನು ಇಲಾಖೆಯಿಂದ ಮುಕ್ತಗೊಳಿಸಲಾಗುವುದು. ಕಂದಾಯ, ಸರ್ವೇ ಇಲಾಖೆಗಳಲ್ಲಿನ ಎಲ್ಲಾ ಖಾಲಿ ಇರುವ ಹುದ್ದೆಗಳನ್ನು ಲೋಕಾಸೇವಾ ಆಯೋಗಕ್ಕೆ ವರದಿ ಮಾಡಲಾಗುವುದು" ಎಂದು ಹೇಳಿದರು.