ಸುಳ್ಯ, ಜು 16 (DaijiworldNews/PY): ಬಾಲ್ಯ ವಿವಾಹ ನಡೆಯುತ್ತಿದೆ ಎನ್ನುವ ಮಾಹಿತಿ ದೊರೆತ ಹಿನ್ನೆಲೆ ಸಿಡಿಪಿಒ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿ ವಿವಾಹ ತಡೆದ ಘಟನೆ ಜುಲೈ 14ರಂದು ದುಗಲಡ್ಕದ ಕಂದಡ್ಕದಲ್ಲಿ ನಡೆದಿದೆ.
ತಮಿಳು ಕಾಲನಿಯಲ್ಲಿನ ಪ್ರತಾಪ (26) ಎಂಬವನಿಗೆ ಜುಲೈ 15ರಂದು ಮೈಸೂರಿನ ಹುಡುಗಿಯೊಂದಿಗೆ ವಿವಾಹ ನಡೆಯುವುದು ಎಂದು ನಿಶ್ಚಯಿಸಲಾಗಿತ್ತು. ಹುಡುಗಿಗೆ 18 ವರ್ಷ ಆಗಿಲ್ಲ ಎನ್ನುವ ಮಾಹಿತಿ ಬಂದ ಹಿನ್ನೆಲೆ ಸಿ.ಡಿ.ಪಿ.ಒ ರಶ್ಮಿ ಅಶೋಕ್, ಸಹಾಯಕ ಮಕ್ಕಳ ಸಂರಕ್ಷಣಾಧಿಕಾರಿ ದೀಪಿಕಾ, ಗ್ರಾಮಕರಣಿಕ ತಿಪ್ಪೇಶ್ ಅವರು ನಾಲ್ಕು ಮಂದಿ ಪೊಲೀಸಸರ ಜೊತೆ ಕಂದಡ್ಕ ಎಂಬಲ್ಲಿಗೆ ತೆರಳಿದ್ದಾರೆ.
ಈ ವೇಳೆ ಅಧಿಕಾರಿಗಳ ತಂಡ ಪೂರಕ ಮಾಹಿತಿ ಕೇಳಿದ್ದು, ಹುಡುಗಿಯ ಕುಟುಂಬ ದಾಖಲೆ ನೀಡಲು ತಡವರಿಸಿ 18 ವರ್ಷವಾಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ.
"ವಿವಾಹ ರದ್ದುಪಡಿಸಿದ ಬಳಿಕ ಹುಡುಗಿಯ ಪೋಷಕರಿಂದ ಪತ್ರವೊಂದಕ್ಕೆ ಸಹಿ ಮಾಡಿಸಿಕೊಳ್ಳಲಾಗಿತ್ತು. ಪತ್ರದಲ್ಲಿ ಹುಡುಗಿಗೆ 18 ವರ್ಷ ತುಂಬಿದ ಬಳಿಕ ಇದೇ ಹುಡುಗನೊಂದಿಗೆ ವಿವಾಹ ಮಾಡಿಕೊಡುವುದಾಗಿ ಪತ್ರದಲ್ಲಿ ತಿಳಿಸಿದ್ದರು" ಎಂದು ಸಿಡಿಪಿಒ ರಶ್ಮಿ ಅಶೋಕ್ ಅವರು ಹೇಳಿದ್ದಾರೆ.