ನೆಲ್ಯಾಡಿ, ಜು. 16 (DaijiworldNews/SM): ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ನಡೆದಿದ್ದ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ ನಡೆಸಿ ಪರಾರಿಯಾಗಿದ್ದ ಬಸ್
ಚೇಸ್ ಮಾಡಿ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನೆಲ್ಯಾಡಿಯಿಂದ ಪರಾರಿಯಾಗಿದ್ದ ಕೆ ಎಸ್ ಆರ್ ಟಿಸಿ ಬಸ್ಸನ್ನು ಗುಂಡ್ಯ ಸಮೀಪ ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಬಾಲಕೃಷ್ಣ, ಯೋಗರಾಜ್ ಎಂಬ ಸಿಬ್ಬಂದಿಗಳಿಂದ ತುರ್ತು ಕಾರ್ಯಾಚರಣೆ ನಡೆಸಲಾಗಿದೆ.
ಇನ್ನು ಹಿಡ್ ಆಂಡ್ ರನ್ ಪ್ರಕರಣದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಸಹ ಸವಾರನ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನು ಸಕಲೇಶಪುರ ಮೂಲದ ಅರುಣ್ ಅಪಘಾತದಲ್ಲಿ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.