ವಿಟ್ಲ, ಜು.17 (DaijiworldNews/HR): ಕಸಬಾ ಗ್ರಾಮದ ನಡುವಡ್ಕದಲ್ಲಿ ನಾಯ್ತೊಟ್ಟು ಹೊಳೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಒಬ್ಬರು ಶನಿವಾರ ಮೃತಪಟ್ಟಿದ್ದಾರೆ.
ಸಾಂಧರ್ಭಿಕ ಚಿತ್ರ
ಬಳಂತಿಮುಗೇರು ಶಾಲೆ ಸಮೀಪದ ನಿವಾಸಿ ಅವಿವಾಹಿತ ವಸಂತ ನಾಯ್ಕ (40) ಮೃತರಾಗಿದ್ದಾರೆ.
ಸ್ಥಳಕ್ಕೆ ಕಂದಾಯ ನಿರೀಕ್ಷಕ ದಿವಾಕರ ಮುಗುಳ್ಯ, ಗ್ರಾಮಕರಣಿಕ ಪ್ರಕಾಶ್, ಗ್ರಾಮಸಹಾಯಕ ಲಿಂಗಪ್ಪ ಅವರು ಭೇಟಿ ನೀಡಿದ್ದಾರೆ.
ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.