ಬಂಟ್ವಾಳ, ಜು.17 (DaijiworldNews/HR): ನಿಶ್ಚಿತಾರ್ಥವಾಗಿದ್ದ ಯುವತಿಯ ಮನೆಗೆ ಬಂದು ಜಗಳವಾಡಿದ್ದು, ಆಕೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಆಕೆಯ ಮದುವೆ ನಿಲ್ಲಿಸಿರುವ ಯುವಕನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲ್ಲೂಕಿನ 21 ವರ್ಷದ ಯುವತಿಗೆ ಮೂರು ವರ್ಷದಿಂದ ಆರೋಪಿ ಇರ್ಫಾನ್ ಎಂಬಾತನ ಪರಿಚಯವಿದ್ದು, ಎಂಟು ತಿಂಗಳ ಹಿಂದಿನ ಪ್ರೀತಿಯ ವಿಚಾರವಾಗಿ ಆರೋಪಿ ಇರ್ಫಾನ್ ಯುವತಿಯ ಮನೆಗೆ ಬಂದು ಜಗಳವಾಡಿದ್ದು, ಬಳಿಕ ಯುವತಿಯ ತಂಗಿಯ ಮೊಬೈಲ್ಗೆ ಕರೆ ಮಾಡಿ ಆಕೆಯ ಹಳೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಈಗಾಗಲೇ ನಿಶ್ಚಿಯವಾಗಿದ್ದ ಮದುವೆಯನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಮದುವೆಯಾಗುವ ಯುವಕನ ಮನೆಯವರಿಗೆ ಕರೆ ಮಾಡಿ ಬೆದರಿಕೆ ಹಾಕಿ ಮದುವೆಯನ್ನು ನಿಲ್ಲಿಸಿದ್ದಾನೆ ಎಂದು ಯುವತಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
2020ನೇ ಡಿಸೆಂಬರ್ನಿಂದ ಇದುವರೆಗೆ ನಿರಂತರ ಬೆದರಿಕೆ ಹಾಕಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.