ಮಂಗಳೂರು,ಜು.18 (DaijiworldNews/HR): ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಜು.16 ಶುಕ್ರವಾರ ಭಾರೀ ಭೂ ಕುಸಿತವಾಗಿ ಹಳಿಗಳ ಮೇಲೆ ಮಣ್ಣು ಬಿದ್ದಿರುವುದನ್ನು ಶನಿವಾರ ತೆಗೆಯುವ ಕೆಲಸ ಬಹುತೇಕ ಪೂರ್ಣಗೊಂಡಿದೆ.
ಕಲ್ಲು ಮಣ್ಣಿನ ತೆರವು ಕಾರ್ಯಾಚರಣೆ ಶನಿವಾರ ತಡರಾತ್ರಿಯವರೆಗೂ ನಡೆದಿದ್ದು, ಇಂದು ಬೆಳಗ್ಗಿನಿಂದ ಮತ್ತೆ ರೈಲು ಸಂಚಾರ ಪುನರಾರಂಭಗೊಂಡಿದೆ.
ಇನ್ನು ಪಾಲ್ಘಾಟ್ ರೈಲ್ವೇ ವಿಭಾಗಕ್ಕೆ ಬರುವ ಈ ಹಳಿಯಲ್ಲಿ ಇಂದಿನಿಂದ ರೈಲು ಸಂಚಾರ ಪುನಾರಂಭಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದು, ಅದರಂತೆ ಭಾನುವಾರ ಬೆಳಗ್ಗೆ 8:45ರ ವೇಳೆಗೆ ಎರ್ನಾಕುಲಂನಿಂದ ಅಜ್ಮೀರ್ಗೆ ಮೊದಲ ರೈಲು ಪ್ರಯಾಣ ಬೆಳೆಸಿತು. ಮಣ್ಣು ಕುಸಿತಗೊಂಡ ಕುಲಶೇಖರ ಪ್ರದೇಶದಲ್ಲಿ ರೈಲು ತೆರಳುವ ವೇಳೆ ರೈಲ್ವೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು-ಕಾರವಾರ-ಬೆಂಗಳೂರು ಎಕ್ಸ್ಪ್ರೆಸ್ ರೈಲು ಶನಿವಾರ ರದ್ದಾಗಿದೆ.
ಭೂ ಕುಸಿತವಾಗಿರುವ ಹಿನ್ನಲೆಯಲ್ಲಿ ಈ ಹಳಿಯ ಮೂಲಕ ಚಲಿಸುವ ಎಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು,ದಕ್ಷಿಣ ಮಧ್ಯ ರೈಲ್ವೆ ಸೋಮವಾರದಿಂದ ಕಾಯ್ದಿರಿಸದ ರೈಲುಗಳನ್ನು ಪುನರಾರಂಭಿಸಲಿದೆ.
ಇನ್ನು ರೈಲ್ವೆ ಇಲಾಖೆಯು ಕಳೆದ ಒಂದು ವರ್ಷದಲ್ಲಿ ಪ್ರಮುಖ ಟ್ರ್ಯಾಕ್ ಬಲಪಡಿಸುವ ಕಾರ್ಯಗಳನ್ನು ಕೈಗೊಂಡಿದ್ದು, ಇದೀಗ ರೈಲುಗಳು ಚಗ್ ಮಾಡಬಹುದಾದ ಗರಿಷ್ಠ ಅನುಮತಿಸುವ ವೇಗವನ್ನು ಹೆಚ್ಚಿಸುತ್ತದೆ.