ಬಂಟ್ವಾಳ, ಜು 19 (DaijiworldNews/MS): ಗಾಂಜಾವನ್ನು ಅಕ್ರಮವಾಗಿ ಶೇಖರಿಸಿ ವಿತರಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು, ಜೀಪನಡು ಗ್ರಾಮದ ಕಂಚಿನಡ್ಕ ಪದವು ಇಕ್ಬಾಲ್ ಯಾನೆ ಕಡ್ಲೆ ಇಕ್ಬಾಲ್ ನನ್ನು ಬಂಧಿಸಿದ್ದಾರೆ.
ಬಂಧಿತನಿಂದ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 30,000 ಮೌಲ್ಯದ 1 ಕೆ.ಜಿ 150 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಸಹ ಆರೋಪಿಗಳಾದ ಸಜೀಪನಡುವಿನ ಎಸ್.ಕೆ ರಫೀಕ್ ಮತ್ತು ಕಂಚಿನಡ್ಕ ಪದವಿನ ಮೋನು ಯಾನೆ ಪಿಲಿ ಮೋನು ತಲೆಮರೆಸಿಕೊಂಡಿರುತ್ತಾರೆ
ಪ್ರಕರಣದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ. ಎಂ.ಎಸ್, ವಿಶೇಷ ತಂಡದ ಸದಸ್ಯರಾದ ಉದಯ ರವಿ, ಜನಾರ್ಧನ, ಸುರೇಶ್, ಪ್ರವೀಣ್, ಗೋಣಿಬಸಪ್ಪ, ಇರ್ಷಾದ್, ವಿವೇಕ್, ಕುಮಾರ್ ರವರ ತಂಡ ಪಾಲ್ಗೊಂಡಿರುತ್ತಾರೆ.