ಮಂಗಳೂರು, ಜು 19 (DaijiworldNews/MS): ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನಲೆಯಲ್ಲಿ ಮಂಗಳೂರು ನಗರದ ಪದವು ಹಾಗೂ ಕಪಿತಾನಿಯ ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಜು.19ರ ಸೋಮವಾರ ಭೇಟಿ ನೀಡಿ, ಪರೀಕ್ಷಾ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.
ಡಿಡಿಪಿಐ ಮಲ್ಲೆ ಸ್ವಾಮಿ ಅವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಯವರು, ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತರಬೇಕು, ಕೇರಳದಿಂದ ಪರೀಕ್ಷೆ ಬರೆಯಲು ಬಂದಿರುವ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಿರುವುದನ್ನು ಖಾತ್ರಿಪಡಿಸಿಕೊಂಡರು.
ಈ ಸಂದರ್ಭದಲ್ಲಿ ಸಂಬಂಧಿಸಿದ ಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇನ್ನು ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಕ್ರಿಯೆ ಹಾಗೂ ಕೋವಿಡ್ ಮಾರ್ಗಸೂಚಿಗಳ ಪಾಲನೆ ಕುರಿತಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಗರದ ಜಪ್ಪು ನಲ್ಲಿರುವ ಸೆಂಟ್ ಜೋಸೆಫ್ ಶಾಲೆ, ಪೆರ್ಮನ್ನೂರು-ಬಬ್ಬುಕಟ್ಟೆಯ ನಿತ್ಯಾಧರ ಪ್ರೌಡ ಶಾಲೆ, ಹಾಗೂ ಹಿರಾ ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಡಿಡಿಪಿಐ ಮಲ್ಲೇ ಸ್ವಾಮಿ ಅವರಿದ್ದರು.