ಕುಂದಾಪುರ, ಜು 19 (DaijiworldNews/MS): ನಳಿನ್ ಕುಮಾರ್ ಕಟೀಲ್ ಅವರ ಹೆಸರಲ್ಲಿ ಆಡಿಯೋ ಬಿಡುಗಡೆ ಮಾಡಲಾಗಿದೆ. ನಳಿನ್ ಕುಮಾರ್ ಸ್ವರಭಾರಕ್ಕೂ ಈ ಆಡಿಯೋದಲ್ಲಿವ ಸ್ವರದ ಬಗ್ಗೆ ಸಂಶಯ ಇದೆ. ಈ ಆಡಿಯೋ ಬಗ್ಗೆ ತನಿಖೆಯಾಗಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಆಗ್ರಹಿಸುತ್ತಿದ್ದೇನೆ. ಸುಳ್ಳು ಆಡಿಯೋ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸೋಮವಾರ ಕುಂದಾಪುರದಲ್ಲಿ ಮಾಧ್ಯಮದವರೊಂದಿಗೆ ಜೊತೆ ಮಾತನಾಡಿದರು. ದೇವಸ್ಥಾನಗಳ ಮೇಳಗಳ ಕಲಾವಿದರಿಗೆ ಪೂರ್ಣ ಸಂಭಾವನೆ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಬಹುತೇಕ ದೇವಸ್ಥಾನಗಳಲ್ಲಿ ಈಗಾಗಲೇ ವೇತನ ಪಾವತಿ ಮಾಡಲಾಗಿದೆ. ಮಾರಣಕಟ್ಟೆಯಲ್ಲಿ ತಡೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಮಾರಣಕಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಸಂಬಳ ಬಿಡುಗಡೆ ಮಾಡುವಂತೆ ಸೂಚನೆ ಕೊಟ್ಟಿದ್ದೇನೆ. ಈಗಾಗಲೇ ಅಧಿಕಾರಿಗಳು ದೇವಸ್ಥಾನದ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಪೂರ್ತಿ ಸಂಬಳ ಕೊಡುವ ಬಗ್ಗೆ ಅವರು ಒಪ್ಪಿಕೊಂಡಿದ್ದಾರೆ. ಒಂದೆರಡು ದಿನಗಳಲ್ಲಿ ಪಾವತಿಯಾಗಲಿದೆ ಎಂದರು.
ದೇವಸ್ಥಾನಗಳು ಈಗಾಗಲೇ ಭಕ್ತರಿಗೆ ಮುಕ್ತವಾಗಿದೆ. ಸೀಮಿತ ಭಕ್ತರಿಗೆ ದೇವಾಲಯದಲ್ಲಿ ಅನ್ನದಾಸೋಹ ನಡೆಸಲು ಚರ್ಚಿಸಲಾಗಿದೆ. ದೂರದಿಂದ ಭರುವ ಭಕ್ತರಿಗೆ ಸಮಸ್ಯೆಯಾಗಬಾರದೆಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದ್ದು, ಈಗಾಗಲೇ ಮುಖ್ಯಮಂತ್ರಿಯವರೊಂದಿಗೆ ದೇವಸ್ಥಾನದಲ್ಲಿ ಅನ್ನದಾಸೋಹ ನಡೆಸುವ ಕುರಿತು ಚರ್ಚಿಸಲಾಗಿದೆ. ಕೆಲವೇ ದಿನಗಳಲ್ಲಿ ತೀರ್ಮಾನ ತಗೆದುಕೊಳ್ಳಲಾಗುತ್ತದೆ ಎಂದರು.
ದೇವಸ್ಥಾನದಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗಳನ್ನು ಅಂತರಜಿಲ್ಲೆಯ ಒಳಗಡೆ ವರ್ಗಾವಣೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಒಳ್ಳೆಯ ಕೆಲವ ಮಾಡುವ ಸಿಬ್ಬಂದಿಗಳ ಸೇವೆ ಎಲ್ಲ ಕಡೆ ಸಿಗಬೇಕು ಎನ್ನುವ ಉದ್ದೇಶದಿಂದ ವರ್ಗಾವಣೆ ಬಗ್ಗೆ ಚಿಂತಿಸಲಾಗಿದೆ ಎಂದರು.
ಗೋಮಾಳ ಸಂರಕ್ಷಿಲು ಸರ್ಕಾರ ಸೂಚಿಸಿದೆ. ಆದರೆ ಕೆಲವೆಡೆ ಬಡವರು ಗೋಮಾಳದಲ್ಲಿ ಮನೆ ಕಟ್ಟಿಕೊಂಡಾಗಿದೆ. ಆ ಗೋಮಾಳ ಜಾಗಕ್ಕೆ ಹಕ್ಕು ಪತ್ರಗಳನ್ನು ಕೊಡುವ ವೇಳೆ ಮತ್ತೊಂದು ಸರ್ಕಾರಿ ಜಾಗವನ್ನು ಕಾದಿರಿಸಿಕೊಂಡು ಕೊಡಬೇಕು. ಈ ಮೂಲಕ ಬಡವರಿಗೆ ಮನೆಯ ಜೊತೆಗೆ ಗೋಮಾಳ ರಕ್ಷಣೆ ಆದಂತೆಯೂ ಆಗುತ್ತದೆ ಎಂದರು.